ದೆಹಲಿ ವಿಧಾನಸಭೆ ಚುನಾವಣೆ: ಬಿಜೆಪಿಗೆ ಕುಮಾರ್ ವಿಶ್ವಾಸ್ ಸೇರ್ಪಡೆ?
ನವದೆಹಲಿ, ಜನವರಿ 15: ದೆಹಲಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಹೊಸ ಶಕ್ತಿ ಬಂದಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಬಲವನ್ನು ಎದುರಿಸಲು ಅದೇ ಪಕ್ಷದ ಮಾಜಿ ಮುಖಂಡರೊಬ್ಬರ ಬಲ ಸಿಗುವ ಸೂಚನೆ ಸಿಕ್ಕಿದೆ.
ಎಎಪಿಯಲ್ಲಿನ ಬಂಡಾಯವೆದ್ದು ಪಕ್ಷದಿಂದ ಹೊರಗೆ ಬಂದಿದ್ದ ಪ್ರಭಾವಿ ನಾಯಕ ಕುಮಾರ್ ವಿಶ್ವಾಸ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ಕುಮಾರ್ ವಿಶ್ವಾಸ್ ಆಗಮನ ಬಿಜೆಪಿಯ ಉತ್ಸಾಹವನ್ನು ಇಮ್ಮಡಿಗೊಳಿಸಿದರೆ, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಗಳ ಸಾಲಿನಲ್ಲಿ ಮುಂಚೂಣಿಗೆ ಬರಲಿದ್ದಾರೆ. ಎಎಪಿಯನ್ನು ಎದುರಿಸಲು ಸೂಕ್ತ ಅಭ್ಯರ್ಥಿ ಆಯ್ಕೆಯ ಹುಡುಕಾಟದಲ್ಲಿರುವ ಬಿಜೆಪಿ ಕುಮಾರ್ ವಿಶ್ವಾಸ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೂಲತಃ ಕವಿ ಮತ್ತು ಅಧ್ಯಾಪಕರಾಗಿರುವ ಕುಮಾರ್ ವಿಶ್ವಾಸ್, 2005ರಿಂದಲೂ ಅರವಿಂದ್ ಕೇಜ್ರಿವಾಲ್ ಜತೆಗಿದ್ದರು. ಅಣ್ಣಾ ಹಜಾರೆ ನಡೆಸಿದ್ದ ಭ್ರಷ್ಟಾಚಾರ ವಿರೋಧಿ ಚಳವಳಿಯಲ್ಲಿ ಪಾಲ್ಗೊಂಡಿದ್ದರು.

ಪಕ್ಷ ಸೇರ್ಪಡೆ ಸುದ್ದಿ
ಕುಮಾರ್ ವಿಶ್ವಾಸ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಈ ಹಿಂದೆಯೂ ಹರಡಿತ್ತು. ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಆತಿಶಿ ಸ್ಪರ್ಧಿಸಿದ್ದ ಪೂರ್ವ ದೆಹಲಿ ಕ್ಷೇತ್ರದಿಂದ ವಿಶ್ವಾಸ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕಣಕ್ಕಿಳಿದು ಜಯಗಳಿಸಿದ್ದರು. ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎಂಬ ವದಂತಿ ಹರಡಿದ್ದರೂ, ವಿಶ್ವಾಸ್ ರಾಜಕೀಯ ಕಣದಲ್ಲಿ ಕಾಣಿಸಿರಲಿಲ್ಲ.

ಅಮೇಥಿಯಿಂದ ಸ್ಪರ್ಧೆ
2014ರ ಲೋಕಸಭೆ ಚುನಾವಣೆಯಲ್ಲಿ ಕುಮಾರ್ ವಿಶ್ವಾಸ್ ಅಮೇಥಿ ಕ್ಷೇತ್ರದಿಂದ ಎಎಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 2019ರಲ್ಲಿ ಅವರು ರಾಯ್ ಬರೇಲಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಸಹ ಹೇಳಲಾಗಿತ್ತು. ಆದರೆ ಅವರು ಸ್ಪರ್ಧಿಸಿರಲಿಲ್ಲ.

ವಿಶ್ವಾಸ್ ವಿರುದ್ಧ ವಿವಿಧ ಆರೋಪ
2013ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕುಮಾರ್ ವಿಶ್ವಾಸ್ ಮತ್ತು ಶಾಜಿಯಾ ಇಲ್ಮಿ ಸೇರಿದಂತೆ ಎಎಪಿಯ ಕೆಲವು ಸದಸ್ಯರು ಅಕ್ರಮವಾಗಿ ಹಣ ದೇಣಿಗೆ ಸಂಗ್ರಹಿಸಿದ್ದರು ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. 2016ರಲ್ಲಿ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಸಹ ಕೇಳಿಬಂದಿತ್ತು.

ಕೇಜ್ರಿವಾಲ್ ವಿರುದ್ಧ ಮುನಿಸು
ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆ ವೇಳೆ ತಮ್ಮನ್ನು ಕಡೆಗಣಿಸಿದ್ದಕ್ಕೆ ಅರವಿಂದ್ ಕೇಜ್ರಿವಾಲ್ ವಿರುದ್ಧ ವಿಶ್ವಾಸ್ ಮುನಿಸಿಕೊಂಡಿದ್ದರು. ಬಳಿಕ ಇಬ್ಬರ ನಡುವಿನ ಕಲಹ ತೀವ್ರಗೊಂಡಿತ್ತು. ಕುಮಾರ್ ವಿಶ್ವಾಸ್ ಅವರಿಗೆ ಆರೆಸ್ಸೆಸ್ ಜತೆ ನಂಟು ಇದೆ ಎಂದು ಎಎಪಿ ಶಾಸಕರು ಆರೋಪಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications