ದೆಹಲಿ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ಸೇರಿದ ಆಪ್ ಶಾಸಕ
ನವದೆಹಲಿ, ಜನವರಿ 29: ದೆಹಲಿ ಚುನಾವಣೆ ಸನ್ನಿಹಿತವಾಗುತ್ತಿರುವಾಗಲೇ ಆಮ್ ಆದ್ಮಿ ಪಕ್ಷದ ಶಾಸಕ ಮನೋಜ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಆಮ್ ಆದ್ಮಿ ಪಕ್ಷವು ಮನೋಜ್ ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದ ಕಾರಣ ಬಿಜೆಪಿಗೆ ಸೇರಿದ್ದಾರೆ.ಮನೋಜ್ ಕುಮಾರ್ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಅವರ ಚುನಾವಣಾ ಮೆರವಣಿಗೆ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆಮ್ಆದ್ಮಿ ಪಕ್ಷವು ಕೊಂಡ್ಲಿ ವಿಧಾನಸಭಾ ಕ್ಷೇತ್ರದಿಂದ ಕುಲ್ದೀಪ್ ಕುಮಾರ್ ಅವರನ್ನು ಕಣಕ್ಕಿಳಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ 'ಆಮ್ ಆದ್ಮಿ'ಯೇ ಕುಬೇರ
ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಮನೋಜ್ ಕುಮಾರ್ ಅರವಿಂದ್ ಕೇಜ್ರಿವಾಲ್ ಅವರು ಜನರಿಗೆ ಸುಳ್ಳು ಕನಸುಗಳನ್ನು ತೋರಿಸುತ್ತಾರೆ. ಈ ಐದು ವರ್ಷಗಳಲ್ಲಿ ನಾನು ಮಾಡಿದ ಅಭಿವೃದ್ಧಿಯನ್ನು ಪುನಃ ಬಯಸುತ್ತಿದ್ದರೆ ಈ ಬಾರಿ ಬಿಜೆಪಿಗೆ ಮತ ಹಾಕಿ ಎಂದು ಕೇಳಿಕೊಂಡಿದ್ದಾರೆ.
ಆಮ್ಆದ್ಮಿ ಪಕ್ಷದಿಂದ 70 ಮಂದಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಯೂ ಅವರ ವಿರುದ್ಧ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಎಲ್ಲಾ ಪ್ರಮುಖ ಪಕ್ಷಗಳು ಫೆ.8 ರಂದು ನಡೆಲಿರುವ ವಿಧಾನಸಭಾ ಚುನಾವಣೆಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಫೆಬ್ರವರಿ 11 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.