ಆಮ್ ಆದ್ಮಿ ಪಕ್ಷದ ಶಾಸಕ ಸಂದೀಪ್ ಕುಮಾರ್ ಅನರ್ಹ
ನವದೆಹಲಿ, ಆಗಸ್ಟ್ 21: ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಕಪಿಲ್ ಮಿಶ್ರಾ ಅವರು ಬಿಜೆಪಿ ಸೇರಿದ ಬೆನ್ನಲ್ಲೇ ಎಎಪಿ ಶಾಸಕರನ್ನು ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅನರ್ಹಗೊಳಿಸಿದ್ದಾರೆ.
ಕಪಿಲ್ ಅವರಲ್ಲದೆ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಮುಖ್ಯಸ್ಥೆ ರಿಚಾ ಸಿಂಗ್ ಕೂಡ ಬಿಜೆಪಿ ಸೇರಿದ್ದಾರೆ. ಇವರನ್ನು ಕೂಡಾ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ಎಎಪಿ ವಿರುದ್ಧ ದೆಹಲಿ ಹೈಕೋರ್ಟಿನಲ್ಲಿ ಕಪಿಲ್ ಮಿಶ್ರಾ ಮೊಕದ್ದಮೆ ಹೂಡಿದ್ದಾರೆ.
ಈಗ ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೊಯೆಲ್ ಅವರು ಮಂಗಳವಾರ(ಆಗಸ್ಟ್ 20)ದಂದು ಪಕ್ಷಾಂತರ ನಿಷೇಧ ಕಾಯ್ದೆ ಆರೋಪದ ಮೇಲೆ ಶಾಸಕ ಸಂದೀಪ್ ಕುಮಾರ್ ಅವರನ್ನು ಅನರ್ಹಗೊಳಿಸಿದ್ದಾರೆ. ಕುಮಾರ್ ಅವರು ಲೋಕಸಭೆ ಚುನಾವಣೆ 2019 ಸಂದರ್ಭದಲ್ಲಿ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದ್ದರು.

ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭಿವೃದ್ಧಿ ಖಾತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವರಾಗಿ ಕುಮಾರ್ ಕಾರ್ಯ ನಿರ್ವಹಿಸಿದ್ದರು.
ಸುಲ್ತಾನ್ ಪುರ್ ಮಾಜ್ರಾ ಕ್ಷೇತ್ರದ ಎಎಪಿ ಶಾಸಕರಾಗಿರುವ ಸಂದೀಪ್ ಅವರು ಬಿಎಸ್ಪಿ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯುಳ್ಳ ವಿಡಿಯೋಗಳನ್ನು ಗ್ರೇಟರ್ ಕೈಲಾಶ್ ಶಾಸಕ, ವಕ್ತಾರ ಸೌರಭ್ ಭಾರದ್ವಾಜ್ ಅವರು ಸಾಕ್ಷಿಯಾಗಿ ನೀಡಿದ್ದರು.
"ಸೌರಭ್ ಅವರು ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೆ, ವಿಡಿಯೋ ಎಲ್ಲವೂ ನಕಲಿ" ಎಂದು ಕುಮಾರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸೇರುವುದಾಗಿ ಹೇಳಿದ್ದ ಎಎಪಿ ಶಾಸಕರಾದ ದೇವೇಂದ್ರ ಶೆರಾವತ್ ಹಾಗೂ ಅನಿಲ್ ಬಾಜ್ಪೇಯಿ ಅವರ ಮೇಲೂ ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಕ್ರಮಕ್ಕೆ ಎಎಪಿ ಮುಂದಾಗಿದೆ. ಈ ಇಬ್ಬರು ಶಾಸಕರು ಇನ್ನೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿಲ್ಲ ಎನ್ನಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications