ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಜ್ರಿವಾಲ್ ಸರ್ಕಾರದ ನಿರ್ಲಕ್ಷ್ಯದಿಂದ ನಿರ್ಭಯಾ ಅಪರಾಧಿಗಳ ಗಲ್ಲು ವಿಳಂಬ: ಜಾವಡೇಕರ್

|
Google Oneindia Kannada News

ನವದೆಹಲಿ, ಜನವರಿ 16: ನಿರ್ಭಯಾ ಪ್ರಕರಣದ ಅಪರಾಧಿಗಳ ಮರಣದಂಡನೆ ವಿಳಂಬವಾಗಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಆರೋಪಿಸಿದರು.

ಸುಪ್ರೀಂಕೋರ್ಟ್ 2017ರಲ್ಲಿಯೇ ಮರಣದಂಡನೆ ವಿರುದ್ಧ ಅಪರಾಧಿಗಳು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು. ಆದರೆ ಕೇಜ್ರಿವಾಲ್ ಸರ್ಕಾರವು ಅಪರಾಧಿಗಳಿಗೆ ಡೆತ್ ನೋಟಿಸ್ ನೀಡಲು ಎರಡೂವರೆ ವರ್ಷ ತೆಗೆದುಕೊಂಡಿತು ಎಂದು ಅವರು ಹೇಳಿದರು.

ನಿರ್ಭಯಾ ಪ್ರಕರಣ: ಅಪರಾಧಿಗಳ ಗಲ್ಲು ಶಿಕ್ಷೆ ಜಾರಿ ವಿಳಂಬ ಏಕೆ?ನಿರ್ಭಯಾ ಪ್ರಕರಣ: ಅಪರಾಧಿಗಳ ಗಲ್ಲು ಶಿಕ್ಷೆ ಜಾರಿ ವಿಳಂಬ ಏಕೆ?

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾವಡೇಕರ್, ಸುಪ್ರೀಂಕೋರ್ಟ್ ಆದೇಶ ನೀಡಿದ ಒಂದು ವಾರದೊಳಗೇ ನೋಟಿಸ್ ಹೊರಡಿಸಿದ್ದರೆ ಈ ವೇಳೆಗೆ ಅವರನ್ನು ನೇಣಿಗೇರಿಸಲಾಗಿರುತ್ತಿತ್ತು. ದೇಶಕ್ಕೆ ನ್ಯಾಯ ಸಿಗುತ್ತಿತ್ತು ಎಂದು ಹೇಳಿದರು.

AAPs Neglect Behind Delay In Nirbhaya Case Convicts Hanging: Javadekar

ನ್ಯಾಯಾಲಯದ ಆದೇಶದಂತೆ ನಾಲ್ವರು ಅಪರಾಧಿಗಳನ್ನು ಜ.22ರಂದು ಗಲ್ಲುಶಿಕ್ಷೆಗೆ ಒಳಪಡಿಸಲು ಸಾಧ್ಯವಿಲ್ಲ. ಏಕೆಂದರೆ ಅಪರಾಧಿಗಳಲ್ಲಿ ಒಬ್ಬಾತ ಮುಕೇಶ್ ಸಿಂಗ್ ಸಲ್ಲಿಸಿರುವ ಕ್ಷಮಾದಾನದ ಅರ್ಜಿ ಬಾಕಿ ಇದೆ. ಅದು ಇತ್ಯರ್ಥವಾಗುವವರೆಗೂ ಮರಣದಂಡನೆ ಜಾರಿ ಮಾಡಲಾಗುವುದಿಲ್ಲ ಎಂದು ದೆಹಲಿ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನದ ಅರ್ಜಿಯನ್ನು ದೆಹಲಿ ಸರ್ಕಾರ ಗುರುವಾರ ತಿರಸ್ಕರಿಸಿದೆ. ಬಳಿಕ ಕ್ಷಮಾದಾನದ ಅರ್ಜಿಯನ್ನು ಲೆಫ್ಟಿನೆಂಟ್ ಗವರ್ನರ್ ಅವರಿಗೆ ರವಾನಿಸಲಾಗಿದ್ದು, ಅವರು ಗೃಹ ಸಚಿವಾಲಯಕ್ಕೆ ಕಳುಹಿಸಿದ್ದಾರೆ.

ನಿರ್ಭಯಾ ಪ್ರಕರಣ: ಅಪರಾಧಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತನಿರ್ಭಯಾ ಪ್ರಕರಣ: ಅಪರಾಧಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತ

ಈ ಅರ್ಜಿ ರಾಷ್ಟ್ರಪತಿಯವರ ಬಳಿ ಹೋಗಿ ಅಲ್ಲಿ ತಿರಸ್ಕೃತವಾದರೆ ಬಳಿಕವೇ ಗಲ್ಲುಶಿಕ್ಷೆ ಜಾರಿಯಾಗಲಿದೆ. ಆ ನಡುವೆ ಇತರೆ ಅಪರಾಧಿಗಳಲ್ಲಿ ಒಬ್ಬರು ಕ್ಷಮಾದಾನದ ಅರ್ಜಿ ಸಲ್ಲಿಸಿದ್ದರೂ ಪ್ರಕ್ರಿಯೆ ಮತ್ತೆ ವಿಳಂಬವಾಗಲಿದೆ.

English summary
Union Minister Prakash Javadekar alleged Arvind Kejriwal's AAP government's negligence behind the delay in Hanging of Nirbhaya case convicts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X