ಆರೇ ಕಾಲೋನಿ: ಕಾರ್ ಶೆಡ್ ಗೆ ಓಕೆ, ಮರ ಕಡಿವಂತಿಲ್ಲ ಎಂದ ಸುಪ್ರೀಂ
ನವದೆಹಲಿ, ಅಕ್ಟೋಬರ್ 21: ಮುಂಬೈಯ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ತನ್ನ ಮುಂದಿನ ಆದೇಶದವರೆಗೂ ಈ ಸ್ಥಳದಲ್ಲಿ ಯಾವುದೇ ಮರ ಕಡಿಯುವಂತಿಲ್ಲ ಎಂದಿದೆ.
ನವೆಂಬರ್ 15 ರಂದು ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೂ ಈ ಪ್ರದೇಶದಲ್ಲಿ ಯಾವುದೇ ಮರ ಕಡಿಯುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ಮರಗಳ ಆಕ್ರಂದನ ಕೇಳಿ ಮುಂಬೈಯಲ್ಲಿ ಮಧ್ಯರಾತ್ರಿ ಬೀದಿಗಿಳಿದ ಜನ...
Recommended Video
ಮುಂಬೈ ಮೆಟ್ರೋ ನಿಲ್ದಾಣಕ್ಕೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ಅರೆ ಕಾಲೋನಿಯಲ್ಲಿರುವ 2500 ಮರಗಳನ್ನು ಕಡಿಯಲು ಎಂಎಂಆರ್ ಸಿ ಮುಂದಾಗಿತ್ತು. ಅಕ್ಟೋಬರ್ 4 ರಂದು ಮರಕಡಿವ ಪ್ರಕ್ರಿಯೆ ಆರಂಭಿಸಿದ್ದ ಎಂಎಂಆರ್ ಸಿ ಕ್ರಮವನ್ನು ವಿರೋಧಿಸಿ ಅಂದೇ ಮಧ್ಯ ರಾತ್ರಿ ಈ ಕಾಲೊನಿಯ ಜನರು ಪ್ರತಿಭಟನೆ ಆರಂಭಿಸಿದ್ದರು.
ಮರ ಕಟಾವನ್ನು ವಿರೋಧಿಸಿ ಕೆಲವು ಪರಿಸರವಾದಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್ ಅಕ್ಟೋಬರ್ 4 ರಂದು ತಿರಸ್ಕರಿಸಿತು. ಈ ಮೂಲಕ ಮರಕಡಿಯಲು ಅನುಮತಿ ನೀಡಿತು.
ನಂತರ ಮರ ಕಟಾವಿನ ವಿರುದ್ಧ ವಿವಿಧ ಜನ ನಾಯಕರು, ಸೆಲೆಬ್ರಿಟಿಗಳು ಒಂದಾದ ಕಾರಣ ಕಟಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಮರ ಕಟಾವಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಮೆಟ್ರೋಗಾಗಿ ಮರ ಕಟಾವು: ಸುಪ್ರೀಂಕೋರ್ಟ್ ಮಧ್ಯಂತರ ತಡೆ
ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ಮುಂದುರಿಸಬಹುದು, ಆದರೆ ಮರ ಕಡಿಯುವಂತಿಲ್ಲ ಎಂದಿದೆ.