ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರೇ ಕಾಲೋನಿ: ಕಾರ್ ಶೆಡ್ ಗೆ ಓಕೆ, ಮರ ಕಡಿವಂತಿಲ್ಲ ಎಂದ ಸುಪ್ರೀಂ

|
Google Oneindia Kannada News

ನವದೆಹಲಿ, ಅಕ್ಟೋಬರ್ 21: ಮುಂಬೈಯ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ತನ್ನ ಮುಂದಿನ ಆದೇಶದವರೆಗೂ ಈ ಸ್ಥಳದಲ್ಲಿ ಯಾವುದೇ ಮರ ಕಡಿಯುವಂತಿಲ್ಲ ಎಂದಿದೆ.

ನವೆಂಬರ್ 15 ರಂದು ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೂ ಈ ಪ್ರದೇಶದಲ್ಲಿ ಯಾವುದೇ ಮರ ಕಡಿಯುವಂತಿಲ್ಲ ಎಂದು ಕೋರ್ಟ್ ಹೇಳಿದೆ.

ಮರಗಳ ಆಕ್ರಂದನ ಕೇಳಿ ಮುಂಬೈಯಲ್ಲಿ ಮಧ್ಯರಾತ್ರಿ ಬೀದಿಗಿಳಿದ ಜನ... ಮರಗಳ ಆಕ್ರಂದನ ಕೇಳಿ ಮುಂಬೈಯಲ್ಲಿ ಮಧ್ಯರಾತ್ರಿ ಬೀದಿಗಿಳಿದ ಜನ...

Recommended Video

ಬಿ ಎಸ್ ಯಡಿಯೂರಪ್ಪ ಹುಟ್ಟೂರಾದ ಮಂಡ್ಯ ಜಿಲ್ಲೆಯ ಬೂಕನಕೆರೆ ಗ್ರಾಮದಲ್ಲಿ ಸಂಭ್ರಮ | Oneindia Kannada

ಮುಂಬೈ ಮೆಟ್ರೋ ನಿಲ್ದಾಣಕ್ಕೆ ಕಾರ್ ಶೆಡ್ ನಿರ್ಮಿಸುವ ಸಲುವಾಗಿ ಅರೆ ಕಾಲೋನಿಯಲ್ಲಿರುವ 2500 ಮರಗಳನ್ನು ಕಡಿಯಲು ಎಂಎಂಆರ್ ಸಿ ಮುಂದಾಗಿತ್ತು. ಅಕ್ಟೋಬರ್ 4 ರಂದು ಮರಕಡಿವ ಪ್ರಕ್ರಿಯೆ ಆರಂಭಿಸಿದ್ದ ಎಂಎಂಆರ್ ಸಿ ಕ್ರಮವನ್ನು ವಿರೋಧಿಸಿ ಅಂದೇ ಮಧ್ಯ ರಾತ್ರಿ ಈ ಕಾಲೊನಿಯ ಜನರು ಪ್ರತಿಭಟನೆ ಆರಂಭಿಸಿದ್ದರು.

Aarey Case: SC Says Okay To Metro Car Shed, But No to Felling Of Trees

ಮರ ಕಟಾವನ್ನು ವಿರೋಧಿಸಿ ಕೆಲವು ಪರಿಸರವಾದಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಮಹಾರಾಷ್ಟ್ರ ಹೈಕೋರ್ಟ್ ಅಕ್ಟೋಬರ್ 4 ರಂದು ತಿರಸ್ಕರಿಸಿತು. ಈ ಮೂಲಕ ಮರಕಡಿಯಲು ಅನುಮತಿ ನೀಡಿತು.

ನಂತರ ಮರ ಕಟಾವಿನ ವಿರುದ್ಧ ವಿವಿಧ ಜನ ನಾಯಕರು, ಸೆಲೆಬ್ರಿಟಿಗಳು ಒಂದಾದ ಕಾರಣ ಕಟಾವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಮರ ಕಟಾವಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಮೆಟ್ರೋಗಾಗಿ ಮರ ಕಟಾವು: ಸುಪ್ರೀಂಕೋರ್ಟ್ ಮಧ್ಯಂತರ ತಡೆಮೆಟ್ರೋಗಾಗಿ ಮರ ಕಟಾವು: ಸುಪ್ರೀಂಕೋರ್ಟ್ ಮಧ್ಯಂತರ ತಡೆ

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ಮುಂದುರಿಸಬಹುದು, ಆದರೆ ಮರ ಕಡಿಯುವಂತಿಲ್ಲ ಎಂದಿದೆ.

English summary
Aarey Case: Supreme Court Gives Persmision To Metro construction, But Said, No to felling trees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X