Breaking: ತೀಸ್ತಾ ಸೆಟಲ್ವಾಡ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ನವದೆಹಲಿ, ಸೆ.02: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೂನ್ನಲ್ಲಿ ಆಕೆಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದರು.
2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 25 ರಿಂದ ತೀಸ್ತಾ ಸೆಟಲ್ವಾಡ್ ಬಂಧನದಲ್ಲಿದ್ದರು.
ಪ್ರಕರಣ ಸಂಬಂಧ ತೀಸ್ತಾ ಗುಜರಾತ್ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಆಗಸ್ಟ್ 3 ರಂದು, ಗುಜರಾತ್ ಹೈಕೋಟ್ ವಿಚಾರಣೆಯನ್ನು ಆರು ವಾರಗಳ ನಂತರಕ್ಕೆ ಮುಂದೂಡಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಮಧ್ಯಂತರ ಜಾಮೀನು ನೀಡಿರುವ ನ್ಯಾಯಾಲಯ, ಆಕೆಯನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರಿಗೆ ಈಗಾಗಲೇ ಸಾಕಷ್ಟು ಸಮಯ ಸಿಕ್ಕಿದೆ ಎಂದು ಹೇಳಿದೆ.
ನಿಯಮಿತ ಜಾಮೀನು ಕೋರಿರುವ ಆಕೆಯ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ಮುಂದುವರಿಸಲಿದೆ.
"ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಬೇಕಾಗಿತ್ತು" ಎಂದು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ಅಭಿಪ್ರಾಯಪಟ್ಟಿದೆ.
ಜೂನ್ 24 ರ ಸುಪ್ರೀಂ ಕೋರ್ಟ್ ಆಕೆಯ ಮತ್ತು ಜಾಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದ ಕೇವಲ ಎರಡು ದಿನಗಳ ನಂತರ ಅವರನ್ನು ಬಂಧಿಸಲಾಯಿತು. ಗುಜರಾತ್ ಗಲಭೆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿಯವರನ್ನು ತಪ್ಪಿನಿಂದ ಮುಕ್ತಗೊಳಿಸಿದ ವಿಶೇಷ ತನಿಖಾ ತಂಡವನ್ನು ಪ್ರಶ್ನಿಸಿದ್ದರು.

2002ರ ಗಲಭೆ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪ ಆಕೆಯ ಮೇಲಿದೆ, ಆದರೆ ಪೊಲೀಸರು ಯಾವ ದಾಖಲೆಗಳನ್ನು ನಿರ್ದಿಷ್ಟಪಡಿಸಿಲ್ಲ ಎಂದು ತೀಸ್ತಾ ಪರ ವಕೀಲರು ಹೇಳಿದರು.
ಜಾಮೀನು ಮಂಜೂರು ಮಾಡಿದ ನ್ಯಾಯಾಲಯವು ಶುಕ್ರವಾರ ಆರೋಪಗಳು 2002-12ರ ಅವಧಿಗೆ ಸಂಬಂಧಿಸಿದೆ ಎಂದು ಗಮನಿಸಿದೆ. "ತನಿಖಾ ಸಂಸ್ಥೆಯು ಏಳು ದಿನಗಳ ಕಾಲ ಕಸ್ಟೋಡಿಯನ್ ವಿಚಾರಣೆಯ ಪ್ರಯೋಜನವನ್ನು ಹೊಂದಿದೆ" ಎಂದು ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಹೇಳಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು, ಈ ಪ್ರಕರಣದಲ್ಲಿ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಅದು ಕೂಡ ಮಹಿಳೆಗೆ ಎಂದು ಗಮನಿಸಿದೆ. ತೀಸ್ತಾ ಸೆಟಲ್ವಾಡ್ ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ಈ ಮೊದಲು ನ್ಯಾಯಾಧೀಶರು ಹೇಳಿದ್ದರು.
ಈಗ, ಮಧ್ಯಂತರ ಜಾಮೀನು ನಂತರ ತೀಸ್ತಾ ಸೆಟಲ್ವಾಡ್ ಬಿಡುಗಡೆಯಾಗಲಿದ್ದಾರೆ. ಅವರು ದೇಶ ಬಿಟ್ಟು ಹೋಗದಂತೆ ತಮ್ಮ ಪಾಸ್ಪೋರ್ಟ್ ಅನ್ನು ಸಲ್ಲಿಸಬೇಕಾಗಿದೆ. ಹೀಗಾಗಿ ಅದಕ್ಕಾಗಿ ಅವರನ್ನು ಸಾಧ್ಯವಾದಷ್ಟು ಬೇಗ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಪೀಠವು ತೀರ್ಪು ನೀಡಿತು. ಜೊತೆಗೆ ಅವರು ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications