ಸಿಖ್ ಧ್ವಜ ಹಾರಿಸಿದ ಇಬ್ಬರು ಆರೋಪಿಗಳನ್ನು ಕೆಂಪುಕೋಟೆಗೆ ಕರೆದೊಯ್ದ ಪೊಲೀಸರು
ನವದೆಹಲಿ, ಫೆಬ್ರವರಿ.13: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿ ದೀಪ್ ಸಿಧು ಮತ್ತು ಇಕ್ಬಾಲ್ ಸಿಂಗ್ ರನ್ನು ದೆಹಲಿ ಕ್ರೈಮ್ ಬ್ರ್ಯಾಂಚ್ ಪೊಲೀಸರು ಕೆಂಪುಕೋಟೆಗೆ ಕರೆದುಕೊಂಡು ಹೋಗಿ ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ ಜನವರಿ.26ರಂದು 72ನೇ ಗಣರಾಜ್ಯೋತ್ಸವದ ದಿನವೇ ಕೆಂಪುಕೋಟೆ ಮೇಲೆ ಪ್ರಮುಖ ಆರೋಪಿ ದೀಪ್ ಸಿಧು ಸಿಖ್ ಧ್ವಜವನ್ನು ಹಾರಿಸಿದ್ದರು. ಈ ಹಿನ್ನೆಲೆ ಶನಿವಾರ ಘಟನೆಯ ಮರುಸೃಷ್ಟಿ ಮತ್ತು ವಿಚಾರಣೆಗಾಗಿ ಘಟನಾ ಸ್ಥಳಕ್ಕೆ ಆರೋಪಿಯನ್ನು ಕರೆದೊಯ್ಯಲಾಗಿದೆ.
#WATCH Delhi: 26th January violence accused Iqbal Singh and Deep Sidhu being taken from Delhi Police Crime Branch, Chanakyapuri. pic.twitter.com/9IZfThL8Hn
— ANI (@ANI) February 13, 2021
ದೆಹಲಿ ಹಿಂಸಾಚಾರದ ನಂತರ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ದೀಪ್ ಸಿಧುರನ್ನು ಫೆಬ್ರವರಿ.08ರಂದು ನವದೆಹಲಿಯಿಂದ 100 ಕಿಲೋ ಮೀಟರ್ ದೂರದಲ್ಲಿರುವ ಹರಿಯಾಣದ ಕರ್ನಲ್ ಬಳಿ ದೆಹಲಿ ವಿಶೇಷ ತಂಡದ ಪೊಲೀಸರು ಬಂಧಿಸಿದ್ದರು. ಮತ್ತೊಬ್ಬ ಪ್ರಮುಖ ಆರೋಪಿ ಇಕ್ಬಾಲ್ ಸಿಂಗ್ ನನ್ನು ಮಂಗಳವಾರ ರಾತ್ರಿ ಪಂಜಾಬ್ ಹರಿಯಾರ್ಪುರ್ ಬಳಿ ದೆಹಲಿ ವಿಶೇಷ ತಂಡದ ಪೊಲೀಸರು ಅರೆಸ್ಟ್ ಮಾಡಿದ್ದರು.

ಟ್ರ್ಯಾಕ್ಟರ್ ಜಾಥಾ ದಿನವೇ ಹಿಂಸಾಚಾರ:
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜನವರಿ.26ರಂದು ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡವು ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದೆಹಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.
ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಪ್ರಮುಖ ಆರೋಪಿಗಳಾದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖ್ ದೇವ್ ಸಿಂಗ್, ಇಕ್ಬಾಲ್ ಸಿಂಗ್ ಬಗ್ಗೆ ಮಾಹಿತಿ ನೀಡಿದರೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications