ತಿಹಾರ್ ಜೈಲು ಪಾಲಾದ ಬಾಲಿವುಡ್ ನಟ ರಾಜ್ ಪಾಲ್ ಯಾದವ್
Recommended Video

ನವದೆಹಲಿ, ನವೆಂಬರ್ 30: ಬಾಲಿವುಡ್ ನಟ ರಾಜ್ ಪಾಲ್ ಯಾದವ್ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿದೆ. 5ಕೋಟಿ ರು ಸಾಲ ಹಿಂತಿರುಗಿಸದ ಕಾರಣ ಅವರು ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ರಾಜ್ಪಾಲ್ಯಾದವ್ಗೆ ಮೂರು ತಿಂಗಳುಗಳ ಕಾಲ ಜೈಲುವಾಸ ಶಿಕ್ಷೆ ವಿಧಿಸಿ, ಸಾಮಾನ್ಯ ಕೈದಿ ದರ್ಜೆಯಂತೆ ಸೆರೆಮನೆಯಲ್ಲಿ ಇರಿಸುವಂತೆ ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್ ನ್ಯಾ. ರಾಜೀವ್ ಸಹಾಯ್ ಎಂಡ್ಲಾ ಅವರು ಯಾದವ್ ಅವರನ್ನು ಕೂಡಲೇ ಕಸ್ಟಡಿಗೆ ತೆಗೆದುಕೊಂಡು ತಿಹಾರ್ ಜೈಲಿನಲ್ಲಿ ಇರಿಸುವಂತೆ ನಿರ್ದೇಶಿಸಿದರು.

2010ರಲ್ಲಿ ತೆರೆ ಕಂಡ 'ಅಟಾ ಪಟಾ ಲಾಪಟಾ' ಎನ್ನುವ ಚಿತ್ರ ನಿರ್ಮಾಣ ಹಾಗೂ ನಿರ್ದೇಶನಕ್ಕಾಗಿ ದೆಹಲಿ ಮೂಲದ ಮುರಳಿ ಪ್ರೊಜೆಕ್ಟ್ ಕಂಪನಿಯಿಂದ ಯಾದವ್ ಹಾಗೂ ಅವರ ಪತ್ನಿ ರಾಧಾ ಅವರು 5 ಕೋಟಿ ರು ಹಣ ಪಡೆದುಕೊಂಡಿದ್ದರು.
ಆದರೆ, ಹಣ ವಾಪಸ್ನೀಡಿರಲಿಲ್ಲ. ರಾಜ್ಪಾಲ್ ಒಡೆತನದ ಶ್ರೀ ನವರಂಗ ಎಂಟರ್ಟ್ರೈನ್ಮೆಂಟ್ ಕಂಪನಿ ವಿರುದ್ಧ ಮುರಳಿ ಪ್ರೊಜೆಕ್ಟ್ ಕಂಪನಿ ಸಿವಿಲ್ ಕೇಸ್ ದಾಖಲಿಸಿತ್ತು.
2013ರಲ್ಲಿ 10 ದಿನಗಳ ನ್ಯಾಯಾಂಗ ಬಂಧನವನ್ನು ಅನುಭವಿಸಿದ್ದ ರಾಜ್ ಪಾಲ್ ಅವರು 2015ರಲ್ಲಿ 1.58 ಕೋಟಿ ರು ಪಾವತಿಸಿದ್ದೇನೆ, ಬಾಕಿ ಮೊತ್ತವನ್ನು 30ದಿನಗಳಲ್ಲಿ ಹಿಂತಿರುಗಿಸುವೆ ಎಂದು ಹೇಳಿದ್ದರು. ಆದರೆ, ಮಾತಿಗೆ ತಪ್ಪಿದ್ದರು. ಈಗ ಯಾದವ್ ದಂಪತಿ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications