ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಮಂದಿರ ಭೂಮಿ ಪೂಜೆ ಒಂದು ಭಾವನಾತ್ಮಕ ಕ್ಷಣ: ಅಡ್ವಾಣಿ

|
Google Oneindia Kannada News

ನವದೆಹಲಿ, ಆಗಸ್ಟ್ 05: ಮಂದಿರದ ನನ್ನ ಕನಸು ನನಸಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಎಲ್‌ಕೆ ಅಡ್ವಾಣಿ ಹೇಳಿದ್ದಾರೆ.

Recommended Video

ಶ್ರೀರಾಮನ ಭಕ್ತಿಯಲ್ಲಿ ಮುಳುಗಿಹೋದ ಮೋದಿ | Oneindia Kannada

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸದ ದಿನವು ಕೇವಲ ನನಗಷ್ಟೇ ಅಲ್ಲ ಇಡೀ ದೇಶಕ್ಕೇ ಭಾವನಾತ್ಮಕ ಮತ್ತು ಐತಿಹಾಸಿಕ ದಿನವಾಗಿದೆ.

ಅಯೋಧ್ಯೆ ರಾಮ ಮಂದಿರ ಭೂಮಿಪೂಜೆ: ಧಾರ್ಮಿಕ ಶಕ್ತಿ ಕೇಂದ್ರವಾಗಿದ್ದ ಉಡುಪಿ, ಪೇಜಾವರ ಶ್ರೀಅಯೋಧ್ಯೆ ರಾಮ ಮಂದಿರ ಭೂಮಿಪೂಜೆ: ಧಾರ್ಮಿಕ ಶಕ್ತಿ ಕೇಂದ್ರವಾಗಿದ್ದ ಉಡುಪಿ, ಪೇಜಾವರ ಶ್ರೀ

ಅಲ್ಲದೆ ಶ್ರೀರಾಮ ಜನ್ಮಭೂಮಿಯಲ್ಲಿ ವಿಜೃಂಭಣೆಯ ಮತ್ತು ವೈಭವೋಪೇತ ದೇವಸ್ಥಾನ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ಆಕಾಂಕ್ಷೆ ಮತ್ತು ಗುರಿಯಾಗಿತ್ತು.

Advani Says PM Modi Laying Ram Mandir Foundation Stone Emotional Moment

ರಾಮ ಮಂದಿರವು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವ ಬಲಿಷ್ಠ , ಸಮೃದ್ಧ ಹಾಗೂ ಸಾಮರಸ್ಯದ ಭಾರತವನ್ನು ಪ್ರತಿಬಿಂಬಿಸಲಿದೆ ಎಂದು ಅವರು ಹೇಳಿದ್ದಾರೆ.

ಕೆಲವು ಬಾರಿ ಮಹತ್ವದ ಕನಸುಗಳು ನನಸಾಗಲು ದೀರ್ಘಕಾಲ ತೆಗೆದುಕೊಳ್ಳುತ್ತದೆ. ಆದರೆ ಆ ಕನಸುಗಳು ನೆರವೇರಿದಾಗ ನಿಜಕ್ಕೂ ಜೀವನ ಸಾರ್ಥಕವಾಗುತ್ತದೆ. ನನ್ನ ಹೃದಯಕ್ಕೆ ತೀರಾ ಹತ್ತಿರವಾದ ಅಂಥ ಕನಸು ಈಗ ನೆರವೇರುತ್ತಿದೆ ಎಂದು ಅಡ್ವಾಣಿ ಹೇಳಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಸಾಕಷ್ಟು ಮಂದಿ ಧಾರ್ಮಿಕ , ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊರತುಪಡಿಸಿ ಇನ್ಯಾವುದೇ ರಾಜ್ಯದ ಮುಖ್ಯಮಂತ್ರಿಗಳಿಗೆ ಕಾರ್ಯಕ್ರಮಕ್ಕೆ ಆಹ್ವಾನವನ್ನು ನೀಡಿಲ್ಲ.

English summary
Senior BJP leader and one of the chief architects of the Ram mandir movement, LK Advani, Tuesday said the PM laying the foundation for the temple in Ayodhya is “an emotional day not only for me but for all Indians”, and that he was “humbled destiny had made me perform” a pivotal role in the temple campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X