ಏರ್ ಸ್ಟ್ರೈಕ್ ದಿನ ಬೆಳಿಗ್ಗೆ ಏನಾಯ್ತು? ರಕ್ಷಣಾ ಸಚಿವರೇ ಬಿಚ್ಚಿಟ್ಟ ಸತ್ಯ!
ನವದೆಹಲಿ, ಮಾರ್ಚ್ 20: "ಫೆಬ್ರವರಿ 26 ರಂದು ಬೆಳಿಗ್ಗೆ 4 ಗಂಟೆಗೆ ನನಗೆ ಫೋನ್ ಕಾಲ್ ಬಂತು. ಆಪರೇಶನ್ ಮುಗಿದಿದೆ, ಎಲ್ಲರೂ ಸೇಫ್ ಆಗಿ ಹಿಂದಿರುಗಿದ್ದಾರೆ, ಎಲ್ಲ ಪೈಲೆಟ್ ಗಳೂ ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ತಿಳಿಯಿತು. ಆಗಲೇ ನಾನು ನಿಟ್ಟುಸಿರು ಬಿಟ್ಟಿದ್ದು" ಎಂದು ಏರ್ ಸ್ಟ್ರೈಕ್ ಕುರಿತ ಕೆಲವು ಮಾಹಿತಿಗಳನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಂಚಿಕೊಂಡಿದ್ದಾರೆ.
ಲೇಖಕಿ ಸೋನಿಯಾ ಸಿಂಗ್ ಅವರ Defining India: Through Their Eyes' ಎಂಬ ಪುಸ್ತಕದಲ್ಲಿ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಸಂದರ್ಶನದ ಭಾಗದಲ್ಲಿ ಇದನ್ನು ಉಲ್ಲೇಖಿಸಲಾಗಿದೆ.
1971 ರ ಯುದ್ಧದ ನಂತರ ಭಾರತೀಯ ರಕ್ಷಣಾ ವಲಯದಲ್ಲಾದ ಬದಲಾವಣೆಗಳ ಕುರಿತೂ ಉಲ್ಲೇಖಿಸಲಾಗಿದೆ.

"ಭಾರತದ ರಕ್ಷಣಾ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮೊದಲು ನಮಗೆ ನಮ್ಮ ದೇಶದ ಸಮಸ್ಯೆಗಳನ್ನು ಬಗೆಹರಿಸುವುದೇ ದೊಡ್ಡ ವಿಷಯವಾಗಿತ್ತು. ಆದರೆ ಈಗ ನಾವು ಭಯೋತ್ಪಾದನೆಯನ್ನು ಸಹಿಸಿ ಕೂರೋಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದೇವೆ" ಎಂದು ಸಂದರ್ಶನದಲ್ಲಿ ಸೀತಾರಾಮನ್ ಹೇಳಿದರು.
"ಪುಲ್ವಾಮಾ ದಾಳಿಯ ನಂತರ 10 ದಿನಗಳ ಕಾಲ ನಾವು ಕಾದೆವು. ಏಕೆಂದರೆ ನಮ್ಮ ಉದ್ದೇಶ ಪಾಕಿಸ್ತಾನವನ್ನಾಗಲೀ, ಅದರ ಸೇನೆಯನ್ನಾಗಲಿ ಗುರಿಯಾಗಿಸಿದ್ದಾಗಿರಲಿಲ್ಲ. ಭಯೋತ್ಪಾದಕರನ್ನು ಮಾತ್ರ ಗುರಿಯಾಗಿಸಿದ್ದಾಗಿತ್ತು. ಅದನ್ನು ಸೇನೆಯ ಋಣಾತ್ಮಕ ಹೆಜ್ಜೆ ಎಂದು ನೋಡುವುದು ಸರಿಯಲ್ಲ. ಬಾಲಕೋಟ್ ನ ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡುವ ಮೊದಲು ನಾವು ಸುಖಾ ಸುಮ್ಮನೆ ದಾಳಿ ಮಾಡಲಿಲ್ಲ. ಅದಕ್ಕೂ ಮುನ್ನ ಆ ಶಿಬಿರದ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದೆವು, ಗುಪ್ತಚರ ಇಲಾಖೆಯ ಮೂಲಕ ಸಾಕಷ್ಟು ಮಾಹಿತಿ ಪಡೆದಿದ್ದೆವು" ಎಂದು ಅವರು ಹೇಳಿದರು.
"26/11 ರ ಮುಂಬೈ ದಾಳಿಯ ನಂತರ ಉಗ್ರನೆಲೆ ಪಾಕಿಸ್ತಾನವೇ ಎಂಬುದನ್ನು ಸಾಬೀತುಪಡಿಸುವ ಹಲವು ಸಾಕ್ಷಿಗಳು ಸಿಕ್ಕವು. ನಮ್ಮ ಹಿಂದಿನ ಸರ್ಕಾರಗಳೂ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಿದರೂ ಅದನ್ನು ಪಾಕಿಸ್ತಾನ ಒಪ್ಪಿಕೊಳ್ಳಲಿಲ್ಲ. ವಿಶ್ವಸಂಸ್ಥೆಯೂ ಕೆಲವು ದೇಶಗಳು ಅಡ್ಡಿಪಡಿಸಿದ ಪರಿಣಾಮ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಕರೆಯಲು ಸಾಧ್ಯವಾಗಲಿಲ್ಲ. 2008 ರಿಂದಲೂ ಭಾರತ ಅದಕ್ಕಾಗಿ ಪ್ರಯತ್ನಿಸಿದೆ. ಈಗಲೂ ಅದೇ ಮುಂದುವರಿದಿದೆ"ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications