ಬಾಲಕೋಟ್ ದಾಳಿ ನಂತರ ಮೊದಲ ಬಾರಿಗೆ ಪಾಕ್ ವಾಯುಮಾರ್ಗದಲ್ಲಿ ಮೋದಿ ಪ್ರಯಾಣ
ನವದೆಹಲಿ, ಆಗಸ್ಟ್ 22: ಬಾಲಕೋಟ್ ಏರ್ ಸ್ಟ್ರೈಕ್ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಅವರು ಪಾಕಿಸ್ತಾನದ ವಾಯುಮಾರ್ಗದ ಮೂಲಕ ಪ್ರಯಾಣ ಬೆಳೆಸಿದರು.
ದ್ವಿಪಕ್ಷೀಯ ಸಭೆಗಾಗಿ ಗುರುವಾರ ಫ್ರಾನ್ಸ್ ಗೆ ತೆರಳಿದ ನರೇಂದ್ರ ಮೋದಿ, ನಂತರ ಯನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಬಹ್ರೇನ್ ಗೂ ಪ್ರಯಾಣ ಬೆಳೆಸಲಿದ್ದಾರೆ.
ಫೆಬ್ರವರಿ 14 ರಂದು ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಆತ್ಮಾಹುತಿ ಬಾಂಬರ್ ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಭಾರತದ ನಲವತ್ತಕ್ಕೂ ಹೆಚ್ಚು ಯೋಧರು ಹುತಾತ್ಮರಾಗುದ್ದರು.

ಇಡೀ ವಿಶ್ವವೂ ಈ ಹೇಯ ಕೃತ್ಯವನ್ನು ಖಂಡಿಸಿತ್ತು. ಭಯೋತ್ಪಾದನೆಯನ್ನು ಹತ್ತಿಕ್ಕುವಂತೆ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ನೀಡಿತ್ತು. ಈ ದಾಳಿ ನಡೆದು ಸರಿಯಾಗಿ ಹನ್ನೆರಡು ದಿನಕ್ಕೆ ಅಂದರೆ ಫೆಬ್ರವರಿ 26 ರಂದು ಭಾರತ ಪಾಕಿಸ್ತಾನದಲ್ಲಿರುವ ಬಾಲಕೋಟ್ ನ ಉಗ್ರನೆಲೆಯ ಮೇಲೆ ವಾಯುದಾಳಿ ನಡೆಸಿ ನಡೆಸಿತ್ತು. ಈ ದಾಳಿಯಲ್ಲಿ ನೂರಾರು ಉಗ್ರರನ್ನು ಕೊಲ್ಲಲಾಗಿದೆ ಎಂದು ಭಾರತ ಹೇಳಿತ್ತು. ಆದರೆ ಇದುವರೆಗೆ ಈ ಕುರಿತ ನಿಖರ ಸಂಖ್ಯೆ ಸಿಕ್ಕಿಲ್ಲ. ಈ ಘಟನೆಯ ನಂತರ ಪಾಕಿಸ್ತಾನ ಭಾರತದ ವಿರುದ್ಧ ಮುನಿಸಿಕೊಂಡಿತ್ತು.
ಆ ಘಟನೆಯ ನಂತರ ಭಾರತ ಪಾಕಿಸ್ತಾನದ ವಾಯುಮಾರ್ಗವನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಮೋದಿ ಅವರು ಅದೇ ಮಾರ್ಗವಾಗಿ ಫ್ರಾನ್ಸ್ ಗೆ ಪ್ರಯಾಣ ಬೆಳೆಸಿದ್ದು, ಅಚ್ಚರಿ ಮೂಡಿಸಿದೆ.
ಅದೂ ಅಲ್ಲದೆ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸದ ಭಅರತ ಸರ್ಕಾರದ ನಡೆಯಿಂದ ಉಭಯ ದೇಶಗಳ ನಡುವೆ ಈಗಾಗಲೇ ಮತ್ತಷ್ಟು ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಹೊತ್ತಲ್ಲಿ ಮೋದಿ ಪಾಕ್ ವಾಯುಮಾರ್ಗವಾಗಿ ಪ್ರಯಾಣಿಸಿದ್ದುಗಮನ ಸೆಳೆದಿದೆ.
ಮೊದಲಿಗೆ ಫ್ರಾನ್ಸ್ ಗೆ ತೆರಳುವ ಪ್ರಧಾನಿ ಮೋದಿ, ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಯಲ್ ಮಾಕ್ರೋನ್ ಅವರನ್ನು ಭೇಟಿಯಾಗಿ ಭಯೋತ್ಪಾದನೆಯ ವಿರುದ್ಧ ಹೋರಾಡುವ ಬಗ್ಗೆ ಮಂಆತುಕತೆ ನಡೆಸಲಿದ್ದಾರೆ. ಜೊತೆಗೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಚಾರಗಳೂ ಚರ್ಚೆಗೊಳಗಾಗಲಿವೆ. ಶುಕ್ರವಾರ ಫ್ರಾನ್ಸ್ ನಲ್ಲಿರುವ ಭಾರತೀಯ ಸಮುದಾಯದೊಂದಿಗೆ ಮೋದಿ ಸಂವಾದ ಕಾರ್ಯಕ್ರಮವನ್ನೂ ನಡೆಸಲಿದ್ದಾರೆ. ನಂತರ ಯುಎಇ ಮತ್ತು ಬಹ್ರೇನ್ ಗೆ ತೆರಳಲಿರುವ ಮೋದಿ, ಶುಕ್ರವಾರ ಮತ್ತೆ ಫ್ರಾನ್ಸಿಗೆ ಹಿಂದಿರುಗಿ ಭಾನುವಾರ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications