ಸೆಲ್ಫಿ ತೆಗೆದುಕೊಳ್ಳುವಾಗ ಹೃದಯಾಘಾತವಾಗಿ ಪ್ರಾಣಬಿಟ್ಟ!
ಆಗ್ರಾ, ಸೆಪ್ಟೆಂಬರ್, 22 : ದಿನಗಳೆದಂತೆ ಸೆಲ್ಫೀ ಗೀಳು ಜನರ ಮನದಲ್ಲಿ ಬಹಳ ಗಾಢವಾಗಿಯೇ ಬೇರೂರುತ್ತಿದೆ. ಇದು ಕೆಲವೊಮ್ಮೆ ಪ್ರಾಣಕ್ಕೆ ಸಂಚಕಾರ ತರುವ ಕ್ರಿಯೆ ಎಂದು ಗೊತ್ತಿದ್ದರೂ ಜನರು ಇದರ ಮೋಹದಿಂದ ಹೊರಬರಲು ಇಚ್ಛಿಸುತ್ತಿಲ್ಲ. ನೀವು ಸೆಲ್ಫೀ ಪ್ರಿಯರೇ ಆಗಿದ್ದಲ್ಲಿ ನೀವು ಈ ಸುದ್ಧಿಯನ್ನು ಓದಲೇಬೇಕು.
ಹೌದು..ಪ್ರವಾಸದ ನಿಮಿತ್ತ ಬಂದಿದ್ದ 66 ವರ್ಷದ ಜಪಾನ್ ಪ್ರವಾಸಿಗನೊಬ್ಬ ತಾಜ್ ಮಹಲ್ ವೀಕ್ಷಣೆಯಲ್ಲಿ ತೊಡಗಿದ್ದನು. ಆ ಸಂದರ್ಭದಲ್ಲಿ ಈತ ತಾಜ್ ಮಹಲ್ ನ ಮುಖ್ಯ ದ್ವಾರದ ಬಳಿ ಸೆಲ್ಫೀ ತೆಗೆದುಕೊಳ್ಳುವ ಅವಧಿಯಲ್ಲಿ ಹೃದಯಾಘಾತವಾಗಿದ್ದು, ಆತ ಮೃತಪಟ್ಟಿದ್ದಾನೆ.[ಸೆಲ್ಫಿ ಮೋಹ ಒಂದು ಮಾನಸಿಕ ಕಾಯಿಲೆ - ಮನಶ್ಶಾಸ್ತ್ರಜ್ಞರು]

ತಾಜ್ ಮಹಲ್ ನ ಸೌಂದರ್ಯ ನೋಡಿದ ಪ್ರವಾಸಿಗನೊಬ್ಬ ಸೆಲ್ಫೀ ತೆಗೆದುಕೊಳ್ಳುತ್ತಿರುವಾಗ ಎದೆನೋವು ಕಾಣಿಸಿಕೊಂಡಿದೆ. ಆ ನೋವನ್ನು ತಾಳಲಾರದೆ ಆತ ತಕ್ಷಣ ಮಹಲ್ನ ಮೆಟ್ಟಿಲಿನಿಂದ ಉರುಳಿ ಬಿದ್ದಿದ್ದಾನೆ. ಆತನನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವ ಸಂದರ್ಭದಲ್ಲಿಯೇ ಆತ ಮೃತಪಟ್ಟಿದ್ದಾನೆ. ಬಳಿಕ ಈತನ ದೇಹವನ್ನು ನಾನಾ ಪರೀಕ್ಷೆಗೆ ಒಳಪಡಿಸಿದ ವೈದ್ಯರು ಈತ ಹೃದಯಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಒಟ್ಟಿನಲ್ಲಿ ಸೆಲ್ಫೀ ಪ್ರಾಣಕ್ಕೆ ಕುತ್ತು ತಂದಿತ್ತರೂ, ಮಾನಸಿಕ ಖಿನ್ನತೆಯ ಪ್ರತಿರೂಪ ಎಂದು ಹಣೆಪಟ್ಟಿ ಹೊತ್ತರೂ ಇತ್ತೀಚಿನ ದಿನಗಳಲ್ಲಿ ಇದೊಂದು ಕಲೆಯಾಗಿ, ಶಿಕ್ಷಣವಾಗಿ ಕಂಡು ಬರುತ್ತಿದೆ ಎಂಬುದನ್ನು ಯಾರು ಮರೆಯುವಂತಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications