ಕ್ರಿಶ್ಚಿಯನ್ ಮೈಕಲ್ ನ ಮತ್ತಷ್ಟು ವಿಚಾರಣೆಗೆ ಸಿಬಿಐ ಕೋರ್ಟ್ ಅನುಮತಿ
ನವದೆಹಲಿ, ಮಾರ್ಚ್ 13 : ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಬಂದಿಯಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನನ್ನು ಮತ್ತಷ್ಟು ವಿಚಾರಣೆಗೆ ಗುರಿಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರು ಅನುಮತಿ ನೀಡಿದೆ.
ಈ ಕುರಿತು ಜಾರಿ ನಿರ್ದೇಶನಾಲಯ ಸೋಮವಾರವೇ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಬುಧವಾರ ಮತ್ತು ಗುರುವಾರ ಜಾರಿ ನಿರ್ದೇಶನಾಲಯ ಕ್ರಿಶ್ಚಿಯನ್ ಮೈಕಲ್ ನನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸಲಿದೆ. ಮುಂದಿನ ವಿಚಾರಣೆ ಮಾರ್ಚ್ 14ರಂದು ನಡೆಯಲಿದೆ.
ಯುಪಿಎ ಸರಕಾರವಿದ್ದಾಗ 2006 ಮತ್ತು 2007ರಲ್ಲಿ, ಇಂಗ್ಲೆಂಡ್ ಮೂಲಕ ಕ್ರಿಶ್ಚಿಯನ್ ಮೈಕಲ್, ಡೀಲ್ ಕುದುರಿಸಲು ಮತ್ತು ಭಾರತದ ರಾಜಕಾರಣಿಗಳಿಗೆ ಲಂಚ ನೀಡಲೆಂದು, ಇಟಲಿ ಮೂಲದ ಹೆಲಿಕಾಪ್ಟರ್ ತಯಾರಿಕಾ ಕಂಪನಿಯಿಂದ ಹಣ ಪಡೆದಿದ್ದ ಆರೋಪ ಎದುರಿಸುತ್ತಿದ್ದಾನೆ.
ಬಹುಕೋಟಿ ಮೌಲ್ಯಕ್ಕೆ 12 ವಿವಿಐಪಿ ಹೆಲಿಕಾಪ್ಟರ್ ಖರೀದಿಯ ವಿಷಯದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಅಂದಿನ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು 2013ರಲ್ಲಿಯೇ ಒಪ್ಪಿಕೊಂಡಿದ್ದರು. ನಂತರ 3,600 ಕೋಟಿ ರುಪಾಯಿ ಮೌಲ್ಯದ ಈ ವಹಿವಾಟನ್ನು ಕ್ಯಾನ್ಸಲ್ ಮಾಡಲು ಸರಕಾರ 2014ರ ಜನವರಿಯಲ್ಲಿ ನಿರ್ಧರಿಸಿತು.

ಸ್ಥಳಾಂತರಿಸಲು ಮೈಕಲ್ ಪತ್ರ : ತಿಹಾರ್ ಜೈಲಿನಲ್ಲಿ ತಾನಿರುವ ವಾರ್ಡ್ 6ರಲ್ಲಿ ಹಲವಾರು ಕಾಶ್ಮೀರಿ ಉಗ್ರರು ಸೇರಿದಂತೆ 150ಕ್ಕೂ ಹೆಚ್ಚು ಆರೋಪಿಗಳಿದ್ದಾರೆ. ತನ್ನನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕ್ರಿಶ್ಚಿಯನ್ ಮೈಕಲ್ ಪತ್ರ ಬರೆದಿದ್ದಾನೆ. ತನಗೆ ಜೈಲಿನಲ್ಲಿ ಚಿತ್ರಹಿಂಸೆಯನ್ನೂ ನೀಡಲಾಗಿದೆ ಎಂದು ಮೈಕಲ್ ಆರೋಪಿಸಿದ್ದಾನೆ.
ಸಿಬಿಐ ನ್ಯಾಯಾಲಯ ಈ ಪತ್ರವನ್ನು ಪರಿಗಣಿಸಿದ್ದು, ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಬೇಕೆಂದು ತಿಹಾರ್ ಜೈಲಿನ ಅಧಿಕಾರಿಗಳಿಗೆ ಆದೇಶಿಸಿದೆ. ಜೊತೆಗೆ, ಕಳೆದ 5 ದಿನಗಳ ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್ ಅನ್ನೂ ಕೋರ್ಟಿಗೆ ಸಲ್ಲಿಸಬೇಕೆಂದು ಆದೇಶಿಸಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications