ಕ್ರಿಶ್ಚಿಯನ್ ಮೈಕಲ್ ನ ಮತ್ತಷ್ಟು ವಿಚಾರಣೆಗೆ ಸಿಬಿಐ ಕೋರ್ಟ್ ಅನುಮತಿ
ನವದೆಹಲಿ, ಮಾರ್ಚ್ 13 : ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಬಂದಿಯಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನನ್ನು ಮತ್ತಷ್ಟು ವಿಚಾರಣೆಗೆ ಗುರಿಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರು ಅನುಮತಿ ನೀಡಿದೆ.
ಈ ಕುರಿತು ಜಾರಿ ನಿರ್ದೇಶನಾಲಯ ಸೋಮವಾರವೇ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಬುಧವಾರ ಮತ್ತು ಗುರುವಾರ ಜಾರಿ ನಿರ್ದೇಶನಾಲಯ ಕ್ರಿಶ್ಚಿಯನ್ ಮೈಕಲ್ ನನ್ನು ಹೆಚ್ಚುವರಿ ವಿಚಾರಣೆಗೆ ಒಳಪಡಿಸಲಿದೆ. ಮುಂದಿನ ವಿಚಾರಣೆ ಮಾರ್ಚ್ 14ರಂದು ನಡೆಯಲಿದೆ.
ಯುಪಿಎ ಸರಕಾರವಿದ್ದಾಗ 2006 ಮತ್ತು 2007ರಲ್ಲಿ, ಇಂಗ್ಲೆಂಡ್ ಮೂಲಕ ಕ್ರಿಶ್ಚಿಯನ್ ಮೈಕಲ್, ಡೀಲ್ ಕುದುರಿಸಲು ಮತ್ತು ಭಾರತದ ರಾಜಕಾರಣಿಗಳಿಗೆ ಲಂಚ ನೀಡಲೆಂದು, ಇಟಲಿ ಮೂಲದ ಹೆಲಿಕಾಪ್ಟರ್ ತಯಾರಿಕಾ ಕಂಪನಿಯಿಂದ ಹಣ ಪಡೆದಿದ್ದ ಆರೋಪ ಎದುರಿಸುತ್ತಿದ್ದಾನೆ.
ಬಹುಕೋಟಿ ಮೌಲ್ಯಕ್ಕೆ 12 ವಿವಿಐಪಿ ಹೆಲಿಕಾಪ್ಟರ್ ಖರೀದಿಯ ವಿಷಯದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಅಂದಿನ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು 2013ರಲ್ಲಿಯೇ ಒಪ್ಪಿಕೊಂಡಿದ್ದರು. ನಂತರ 3,600 ಕೋಟಿ ರುಪಾಯಿ ಮೌಲ್ಯದ ಈ ವಹಿವಾಟನ್ನು ಕ್ಯಾನ್ಸಲ್ ಮಾಡಲು ಸರಕಾರ 2014ರ ಜನವರಿಯಲ್ಲಿ ನಿರ್ಧರಿಸಿತು.

ಸ್ಥಳಾಂತರಿಸಲು ಮೈಕಲ್ ಪತ್ರ : ತಿಹಾರ್ ಜೈಲಿನಲ್ಲಿ ತಾನಿರುವ ವಾರ್ಡ್ 6ರಲ್ಲಿ ಹಲವಾರು ಕಾಶ್ಮೀರಿ ಉಗ್ರರು ಸೇರಿದಂತೆ 150ಕ್ಕೂ ಹೆಚ್ಚು ಆರೋಪಿಗಳಿದ್ದಾರೆ. ತನ್ನನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ಕ್ರಿಶ್ಚಿಯನ್ ಮೈಕಲ್ ಪತ್ರ ಬರೆದಿದ್ದಾನೆ. ತನಗೆ ಜೈಲಿನಲ್ಲಿ ಚಿತ್ರಹಿಂಸೆಯನ್ನೂ ನೀಡಲಾಗಿದೆ ಎಂದು ಮೈಕಲ್ ಆರೋಪಿಸಿದ್ದಾನೆ.
ಸಿಬಿಐ ನ್ಯಾಯಾಲಯ ಈ ಪತ್ರವನ್ನು ಪರಿಗಣಿಸಿದ್ದು, ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸಬೇಕೆಂದು ತಿಹಾರ್ ಜೈಲಿನ ಅಧಿಕಾರಿಗಳಿಗೆ ಆದೇಶಿಸಿದೆ. ಜೊತೆಗೆ, ಕಳೆದ 5 ದಿನಗಳ ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್ ಅನ್ನೂ ಕೋರ್ಟಿಗೆ ಸಲ್ಲಿಸಬೇಕೆಂದು ಆದೇಶಿಸಲಾಗಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications