ಅಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣ: ನಿನ್ನೆ 'ಸತ್ತಿದ್ದ' ವ್ಯಕ್ತಿ ನಾಳೆ ಕೋರ್ಟ್ನಲ್ಲಿ ಸಾಕ್ಷಿ ಹೇಳಲಿದ್ದಾರೆ!
ನವದೆಹಲಿ, ಜುಲೈ 31: ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಐಷಾರಾಮಿ ಹೆಲಿಕಾಪ್ಟರ್ ಖರೀದಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೊಡ್ಡ ಯಡವಟ್ಟು ಮಾಡಿಕೊಂಡು ಪೇಚಿಗೀಡಾಗಿದೆ.
ಪ್ರಕರಣದಲ್ಲಿ ಸಾಕ್ಷಿ ಹೇಳಬೇಕಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಮಂಗಳವಾರವಷ್ಟೇ ಘೋಷಿಸಿದ್ದ ಇ.ಡಿ., ಈಗ ಅವರು ಗುರುವಾರ ಸಾಕ್ಷಿ ಹೇಳಲು ಹಾಜರಾಗಲಿದ್ದಾರೆ ಎಂದು ತಿಳಿಸಿದೆ.
ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಹೊಂದಿದ್ದಾರೆ ಎನ್ನಲಾದ ಕೆಕೆ ಖೋಸ್ಲಾ ಅವರು ಮೃತಪಟ್ಟಿರುವುದಾಗಿ ಇ.ಡಿ ಹೇಳಿತ್ತು. ಹಗರಣದಲ್ಲಿ ಲಂಚ ಪಡೆದ ವ್ಯಕ್ತಿಗಳ ಹೆಸರು ಮತ್ತು ಅವುಗಳ ಮೊತ್ತದ ವಿವರವುಳ್ಳ ಕೆಲವು ಕಾಗದಪತ್ರಗಳು ಅವರ ಬಳಿ ಇದ್ದವು ಎಂದು ತಿಳಿಸಿತ್ತು.

ಬಳಿಕ ಬುಧವಾರ ತಮ್ಮ ಹೇಳಿಕೆ ಬದಲಿಸಿದ ಇ.ಡಿ. ಅಧಿಕಾರಿಗಳು, ಅವರು ಜೀವಂತವಿದ್ದಾರೆ. ಅಗತ್ಯಬಿದ್ದಾಗ ಕೋರ್ಟ್ಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ತಾವು ಖೋಸ್ಲಾ ಅವರ ಮನೆಗೆ ಹೋದ ಸಂದರ್ಭದಲ್ಲೆಲ್ಲ ಅವರು ಸಿಗುತ್ತಿರಲಿಲ್ಲ. ಹೀಗಾಗಿ ಅವರು ಮೃತಪಟ್ಟಿರಬಹುದು ಎಂದು ಕೋರ್ಟ್ಗೆ ತಿಳಿಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರು ಕೆಕೆ ಖೋಸ್ಲಾ ಅವರನ್ನು ಕೊಲೆ ಮಾಡಿರಬಹುದು ಎಂದು ಇ.ಡಿಯ ವಕೀಲರು ಹೇಳಿಕೆ ನೀಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications