ಅಗಸ್ಟಾವೆಸ್ಟ್ ಲ್ಯಾಂಡ್ : ಮೈಕೆಲ್ ಭೇಟಿಗೆ ವಕೀಲೆಗೆ ಅನುಮತಿ ಇಲ್ಲ
ನವದೆಹಲಿ, ಡಿಸೆಂಬರ್ 14 : ಅಗಸ್ಟಾವೆಸ್ಟ್ ಲ್ಯಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ನನ್ನು ಭೇಟಿಯಾಗಲು ಪಟಿಯಾಲಾ ಹೌಸ್ ಕೋರ್ಟ್, ಮೈಕೆಲ್ ನನ್ನು ಪ್ರತಿನಿಧಿಸಲು ಬಂದಿದ್ದ ವಕೀಲೆಗೆ ಅವಕಾಶ ನೀಡಿಲ್ಲ.
ರೋಸ್ ಮೆರಿ ಪ್ಯಾಟ್ರಿಜ್ಜಿ ಅವರು, ತಮ್ಮ ಬಳಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ದಾಖಲೆಗಳಿದ್ದು, ಅವನ್ನು ಕೋರ್ಟಿಗೆ ಪ್ರಸ್ತುತ ಪಡಿಸುವುದಾಗಿ ಹೇಳಿದ್ದಾರೆ. ತಾವು ಇಟಲಿ ಮತ್ತು ಸ್ವಿಟ್ಜರ್ಲೆಂಡ್ ನಲ್ಲಿ ಕ್ರಿಶ್ಚಿಯನ್ ಮೈಕೆಲ್ ನನ್ನು ಕಳೆದ 5 ವರ್ಷಗಳಿಂದ ಪ್ರತಿನಿಧಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಆದರೆ, ಅವರು ಮೈಕೆಲ್ ನನ್ನು ಪ್ರತಿನಿಧಿಸಲು ಮತ್ತು ಭೇಟಿಯಾಗಲು ಅವಕಾಶ ನೀಡಬಾರದೆಂದು ಸಿಬಿಐ ವಕೀಲರು ವಾದಿಸಿದ್ದಾರೆ. ರೋಸ್ ಮೆರಿ ಪ್ಯಾಟ್ರಿಜ್ಜಿ ಅವರ ವಿಶ್ವಾಸಾರ್ಹತೆಯ ಬಗ್ಗೆ ತಮಗೆ ಶಂಕೆಯಿದ್ದು, ಬೇಟಿಯಾಗಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದರು.

ಸಿಬಿಐ ವಕೀಲರು, ತಮ್ಮ ಬಳಿ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಹಲವಾರು ದಾಖಲೆಗಳಿದ್ದು, ಸಾಕ್ಷಿಯನ್ನು ದೃಢೀಕರಿಸಲು ಇನ್ನೂ ಐದು ದಿನಗಳ ಕಸ್ಟಡಿ ನೀಡಬೇಕೆಂದು ಕೋರಿತ್ತು. ಅಲ್ಲದೆ, ಹೆಚ್ಚಿನ ವಿಚಾರಣೆಗಾಗಿ ಆತನನ್ನು ಮುಂಬೈಗೆ ಕರೆದೊಯ್ಯಲು ಅವಕಾಶ ಮಾಡಿಕೊಡಬೇಕೆಂದೂ ಸಿಬಿಐ ವಕೀಲರು ಕೋರಿದ್ದಾರೆ. ಭಾರತದ ವಕೀಲ ಅಲ್ಜೋ ಕೆ ಜೋಸೆಫ್ ಅವರು ಕೂಡ ಮೈಕೆಲ್ ನನ್ನು ಪ್ರತಿನಿಧಿಸುತ್ತಿದ್ದಾರೆ.
ಬಂಧಿಸಿದರೂ ಅಚ್ಚರಿಯಿಲ್ಲ : ಕ್ರಿಶ್ಚಿಯನ್ ಮೈಕೆಲ್ ಬಗ್ಗೆ ನನಗೆಲ್ಲ ಗೊತ್ತಿರುವುದರಿಂದ ನನ್ನನ್ನು ಬಂಧಿಸಬಹುದೆಂದು ಹೆದರಿಕೆಯಾಗುತ್ತಿದೆ. ನನಗೇನೂ ಕೆಟ್ಟದಾಗುವುದಿಲ್ಲವೆಂದು ನಂಬಿದ್ದೇನೆ. ನಾನು ಭಾರತಕ್ಕೆ ಬಂದಿರುವುದು ಕ್ರಿಶ್ಚಿಯನ್ ಮೈಕೆಲ್ ನಿಗೆ ಸಹಾಯ ಮಾಡಲೆಂದು. ಕ್ರಿಸ್ಮಸ್ ಒಳಗಾಗಿ ನಾನು ವಾಪಸ್ ನನ್ನ ದೇಶಕ್ಕೆ ವಾಪಸ್ ಹೋಗಿ, ಕುಟುಂಬದೊಡನೆ ಇರುತ್ತೇನೆಂದು ನಂಬಿದ್ದೇನೆ ಎಂದು ವಕೀಲೆ ರೋಸ್ ಮೆರಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜಕಾರಣಿಗಳಿಗೆ ಲಂಚ : ವಿವಿಐಪಿಗಳನ್ನು ಕರೆದೊಯ್ಯುವ ಉದ್ದೇಶದಿಂದ ಭಾರತ ಸರಕಾರ ಮತ್ತು ಇಟಲಿಯ ಅಗಸ್ಟಾ ವೆಸ್ಟ್ ಲ್ಯಾಂಡ್ ಕಂಪನಿಯ ನಡುವೆ 12 ಹೆಲಿಕಾಪ್ಟರ್ ಗಳನ್ನು ಖರೀದಿಸುವ ಒಪ್ಪಂದವಾಗಿತ್ತು. ಇದು ಸಾಕಾರವಾಗಲು ಭಾರತದ ರಾಜಕಾರಣಿ ಮತ್ತು ಅಧಿಕಾರಿಗಳಿಗೆ ಲಂಚ ನೀಡಲೆಂದು ಮೈಕೆಲ್ ಗೆ 225 ಕೋಟಿ ರುಪಾಯಿ ನೀಡಲಾಗಿತ್ತು ಎಂಬುದು ಆರೋಪ.
ಯಾವುದು ಆ ಕುಟುಂಬ? : 36 ಸಾವಿರ ಕೋಟಿ ರುಪಾಯಿಯ ಈ ಹಗರಣದಲ್ಲಿ ಬಂಧಿತನಾಗಿರುವ ಕ್ರಿಶ್ಚಿಯನ್ ಮೈಕೆಲ್ ನ ಅಪ್ಪನಿಗೆ ಹತ್ತಿರವಾಗಿದ್ದ ಭಾರತೀಯ 'ಕುಟುಂಬ'ವೊಂದಕ್ಕೆ ಪರಿಹಾರ ರೂಪವಾಗಿ ಹಣ ನೀಡಿರುವುದಾಗಿ, ಮತ್ತೊಬ್ಬ ದಲ್ಲಾಳಿಗೆ ಬರೆದ ಪತ್ರದಲ್ಲಿ ಕ್ರಿಶ್ಚಿಯನ್ ಮೈಕೆಲ್ ನಮೂದಿಸಿದ್ದ ಎಂಬುದು ಇಟಲಿಯ ಕೋರ್ಟ್ ನಲ್ಲಿರುವ ದಾಖಲೆಯಿಂದ ತಿಳಿದುಬಂದಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications