ನಾಪತ್ತೆಯಾಗಿದ್ದ ರಾಹುಲ್ ಗಾಂಧಿ ದೆಹಲಿಯಲ್ಲಿ ಪತ್ತೆ
ನವದೆಹಲಿ, ಏ.16: 'ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ದೆಹಲಿ ನಿವಾಸಕ್ಕೆ ಎಂಟ್ರಿ ಕೊಟ್ಟಿದ್ದಾರೆ...ರಾಹುಲ್ ಗಾಂಧಿ ಮತ್ತೆ ಭಾರತಕ್ಕೆ ವಾಪಸ್ ಬಂದಿರುವ ಸುದ್ದಿ ಬ್ರೇಕಿಂಗೋ, ಶೇಕಿಂಗೋ, ಟಿವಿ ಮಾಧ್ಯಮಗಳಲ್ಲಂತೂ ರಾಹುಲ್ ಆಗಮನಕ್ಕೆ ರೆಡ್ ಕಾರ್ಪೆಟ್ ಹಾಸಲಾಗಿದೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ರಾತ್ರಿ 11 ಗಂಟೆಗೆ ಥಾಯ್ ಏರ್ ವೇಸ್ ವಿಮಾನದ ಮೂಲಕ ಬಂದಿಳಿದ ರಾಹುಲ್ ಗಾಂಧಿ ಅವರು ದೆಹಲಿಯ ನಿವಾಸಕ್ಕೆ ತೆರಳಿದ್ದಾರೆ. ಫೆ.20ರಂದು ಪ್ರವಾಸಕ್ಕೆ ತೆರಳಿದ್ದ ರಾಹುಲ್ ಅವರು ಎಲ್ಲಿದ್ದಾರೆ? ಹೇಗಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬ ಮಾಹಿತಿಯನ್ನು ಕಾಂಗ್ರೆಸ್ ಗೌಪ್ಯವಾಗಿಟ್ಟಿತ್ತು. [ರಾಹುಲ್ ಗಾಂಧಿ ಎಲ್ಲಿದ್ದರೂ ಮೇ.8 ಪ್ರತ್ಯಕ್ಷವಾಗ್ಲೇ ಬೇಕ್!]

ರಾಹುಲ್ ಅವರು ವಿಯೆಟ್ನಾಂ, ಮ್ಯಾನ್ಮಾರ್, ಥೈಲ್ಯಾಂಡ್, ಯುರೋಪ್, ಭೂತನ್, ಉತ್ತರಾಖಂಡ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಿಹರಿಸುತ್ತಿದ್ದರು ಎಂಬ ಸುದ್ದಿ ಹಬ್ಬಿತ್ತು. [ರಾಹುಲ್ ಗಾಂಧಿ ಪತ್ತೆ ಹಚ್ಚುವಲ್ಲಿ ಸುಬ್ರಮಣ್ಯ ಸ್ವಾಮಿ ಯಶಸ್ವಿ!]
44 ವರ್ಷ ವಯಸ್ಸಿನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬಜೆಟ್ ಅಧಿವೇಶನಕ್ಕೆ ಗೈರು ಹಾಜರಾಗಿದ್ದು, ಭಾರಿ ಸುದ್ದಿಯಾಗಿತ್ತು. ರಾಹುಲ್ ಗಾಂಧಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಯಿತು.
Delhi: Congress vice president Rahul Gandhi arrives at his residence pic.twitter.com/khEz3T400O
— ANI (@ANI_news) April 16, 2015 ಅಲಹಾಬಾದ್ ಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಯಿತು. ಪ್ರಿಯಾಂಕಾ ಕರೆ ತನ್ನಿ, ಕಾಂಗ್ರೆಸ್ ಉಳಿಸಿರಿ ಎಂಬ ಅಭಿಯಾನವೂ ನಡೆದು ಬಿಟ್ಟಿತು.ಏ.19ರಂದು ರೈತರ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಅವರು ಭಾಷಣ ಮಾಡುವ ಸಾಧ್ಯತೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications