ಕಾಂಗ್ರೆಸ್ ಯುವರಾಜನ ಆಸ್ತಿ 10 ಕೋಟಿ ದಾಟುತ್ತಿಲ್ಲ!
ಅಮೇಠಿ, ಏಪ್ರಿಲ್ 14: ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ಅವರ ಆಸ್ತಿಪಾಸ್ತಿಯೂ ಅವರ ತಾಯಿ ರಾಯ್ ಬರೇಲಿಯ ಅಭ್ಯರ್ಥಿ ಸೋನಿಯಾ ಗಾಂಧಿ ಅವರಂತೆ 10 ಕೋಟಿ ರೂ. ಗಡಿ ದಾಟುತ್ತಿಲ್ಲ.
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರು ಶನಿವಾರ ತಮ್ಮ ಆಸ್ತಿ ವಿವರವನ್ನು ಘೋಷಿಸಿದ್ದಾರೆ. ಕಳೆದ ಐದು ವರ್ಷದಲ್ಲಿ ಅವರ ಆಸ್ತಿ ದುಪ್ಪಟ್ಟಾಗಿದೆ. 2009ರಲ್ಲಿ ಚುನಾವಣೆಗೆ ಸ್ಪರ್ಧಿಸುವಾಗ ಅವರ ಬಳಿ 4.7 ಕೋಟಿ ರೂ ಆಸ್ತಿಯಿತ್ತು. ಈಗ ಅದು 9.4 ಕೋಟಿ ರೂ. ಗೆ ತಲುಪಿದೆ. ಆದರೆ, ಸ್ಥಿರಾಸ್ತಿಗಳ ಸಂಖ್ಯೆ ಕಡಿಮೆಯಾಗುತ್ತಿದೆ.
ತನ್ನ ಬಳಿ ಒಂದು ಕಾರು ಸಹ ಇಲ್ಲ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋದರಿ ಪ್ರಿಯಾಂಕಾ ಗಾಂಧಿ ಜತೆ ದೆಹಲಿಯಲ್ಲಿ ಫಾರ್ಮ್ ಹೌಸ್ ಹೊಂದಿದ್ದಾರೆ. ನವದೆಹಲಿಯ ಮೆಹೌಲಿ ಬಳಿಯ ಸುಲ್ತಾನ್ ಪುರ ಗ್ರಾಮದಲ್ಲಿರುವ ಈ ಇಂದಿರಾ ಗಾಂಧಿ ಫಾರ್ಮ್ ಹೌಸ್ ವಿಸ್ತೀರ್ಣ 4.7 ಎಕರೆ. ಎಕರೆಗೆ 53 ಲಕ್ಷ ರೂ. ಬೆಲೆಯಿದೆ ಎಂದು ರಾಹುಲ್ ಘೋಷಿಸಿದ್ದಾರೆ. ಇನ್ನು ತಾವು ಮದುವೆಯಾಗಿಲ್ಲ ಎಂಬುದನ್ನೂ ನಾಮಪತ್ರದಲ್ಲಿ ನಮೂದಿಸಿದ್ದಾರೆ.
ತಾಯಿ ಸೋನಿಯಾರಿಂದ ಸಾಲ ಪಡೆದಿದ್ದಾರೆ:

2012-13ನೇ ಹಣಕಾಸು ವರ್ಷದಲ್ಲಿ ತಮಗೆ 92,46,973 ರೂ. ಆದಾಯ ಬಂದಿದೆ ಎಂದೂ ರಾಹುಲ್ ಘೋಷಿಸಿದ್ದಾರೆ. ಅವರ ಕೈಲಿ 35 ಸಾವಿರ ರೂ. ನಗದು ಇದ್ದು, ಮೂರು ಬ್ಯಾಂಕ್ ಖಾತೆಗಳಲ್ಲಿ 9,50,575 ರೂ. ಠೇವಣಿಯಿದೆ. ಷೇರು, ಮ್ಯೂಚುವಲ್ ಫಂಡ್ ಹಾಗೂ ಡಿಬೆಂಚರುಗಳಲ್ಲಿ 1,90,000 ರೂ. ಹೂಡಿಕೆ ಮಾಡಿದ್ದಾರೆ. ಅವರ ಬಳಿ 330 ಗ್ರಾಂ ಚಿನ್ನಾಭರಣವಿದೆ. 6,89,14,673 ರೂ. ನೀಡಿ ಆಸ್ತಿ ಖರೀದಿಸಿರುವುದಾಗಿಯೂ ಹೇಳಿದ್ದಾರೆ.
ಆಸ್ತಿ ಮೌಲ್ಯ ಹೆಚ್ಚಳಕ್ಕೆ ರಿಯಲ್ ಎಸ್ಟೇಟ್ ಮೌಲ್ಯ ಹೆಚ್ಚಿರುವುದು ಕಾರಣ ಎನ್ನಲಾಗಿದೆ. ಅದೇ ವೇಳೆ, ಅವರು ಹೊಂದಿದ್ದ ಸ್ಥಿರಾಸ್ತಿಗಳ ಸಂಖ್ಯೆ ಕಡಿಮೆಯಾಗಿದ್ದು, ದೆಹಲಿಯ ಮಾಲ್ ಗಳಲ್ಲಿದ್ದ ಎರಡು ಅಂಗಡಿಗಳನ್ನು ಮಾರಾಟ ಮಾಡಿದ್ದಾರೆ. ಜೊತೆಗೆ ಹರ್ಯಾಣದಲ್ಲಿದ್ದ ಕೃಷಿ ಭೂಮಿಯನ್ನೂ ಮಾರಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications