'ಕೊರೊನಾ ಲಸಿಕೆ 9 ತಿಂಗಳಿನಿಂದ 1 ವರ್ಷದವರೆಗೆ ಪರಿಣಾಮಕಾರಿಯಾಗಿರಬಲ್ಲದು'
ನವದೆಹಲಿ, ನವೆಂಬರ್ 24: ಕೊರೊನಾ ವೈರಸ್ ವಿರುದ್ಧ ನೀಡಲಾಗುವ ಲಸಿಕೆಯು ಕನಿಷ್ಠ ಒಂದು ವರ್ಷದವರೆಗೆ ವೈರಸ್ನಿಂದ ರಕ್ಷಣೆ ನೀಡಬಲ್ಲದು ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ಮುಖ್ಯಸ್ಥ ಡಾ. ರಣದೀಪ್ ಗುಲೇರಿಯಾ ತಿಳಿಸಿದ್ದಾರೆ. ಲಸಿಕೆಯು ನೀಡುವ ರಕ್ಷಣೆಯ ಸಾಮರ್ಥ್ಯದ ಬಗ್ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿರುವ ಅವರು, 9 ತಿಂಗಳಿನಿಂದ ಒಂದು ವರ್ಷದವರೆಗೆ ಅದು ಸಮರ್ಥವಾಗಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಲಸಿಕೆಯು ಭಾರಿ ದೊಡ್ಡ ಪ್ರಮಾಣದಲ್ಲಿ ಜನಸಂಖ್ಯೆಗೆ ರಕ್ಷಣೆ ಒದಗಿಸಲಿದೆ ಮತ್ತು ಸೋಂಕು ಹರಡುವಿಕೆಯ ಸರಪಣಿಯನ್ನು ತುಂಡರಿಸುವ ತಾಕತ್ತು ಹೊಂದಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
ಆದರೆ, ಅವರ ಪ್ರಕಾರ ಈ ಕೊರೊನಾ ವೈರಸ್ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗುವುದಿಲ್ಲ. 'ಕೋವಿಡ್ 19 ತೊಲಗುವುದಿಲ್ಲ. ಅದನ್ನು ಕೆಲವು ಸಮಯದವರೆಗೆ ನಿರ್ಮೂಲನೆ ಮಾಡಲು ಆಗುವುದಿಲ್ಲ. ಅದು ಮುಂದೆ ಮೃದು ರೋಗವಾಗಿ ಬದಲಾಗುವುದು' ಎಂದು ಅವರು ಹೇಳಿದ್ದಾರೆ.

2023ರ ವೇಳೆಗೆ ಸೋಂಕಿನ ಪ್ರಮಾಣ ಕಡಿಮೆಯಾಗಲಿದೆ. ಅದಕ್ಕೂ ಮುನ್ನ ವಿಶ್ವ ಆರೋಗ್ಯ ಸಂಸ್ಥೆಯು ಪಿಡುಗು ಅಂತ್ಯಗೊಂಡಿದೆ ಎಂಬ ಘೋಷಿಸುವ ಸಾಧ್ಯತೆ ಇದೆ ಎಂದು ವಿವರಿಸಿದ್ದಾರೆ.
ಭಾರತವು ಕನಿಷ್ಠ ಐದು ಲಸಿಕೆಗಳತ್ತ ಗಮನ ಹರಿಸಿದೆ. ಇದರಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಭಾರತದ ಸೆರಮ್ ಸಂಸ್ಥೆ ಅಭಿವೃದ್ಧಿಪಡಿಸುತ್ತಿರುವ ಕೋವಿಶೀಲ್ಡ್ ಮುಖ್ಯವಾಗಿದೆ. ಭಾರತದಲ್ಲಿ ಈ ಲಸಿಕೆಯು ಮೂರನೇ ಹಂತದ ಪ್ರಯೋಗದಲ್ಲಿದೆ. ಶೀಘ್ರದಲ್ಲಿಯೇ ಲಸಿಕೆಯ ತುರ್ತು ಬಳಕೆ ಅಧಿಕಾರವನ್ನು ಪಡೆದುಕೊಳ್ಳುವುದಾಗಿ ಈಗಾಗಲೇ ಸೆರಮ್ ಸಂಸ್ಥೆ ತಿಳಿಸಿದೆ.
ಭಾರತದ ಭಾರತ್ ಬಯೋಟೆಕ್ ಸಂಸ್ಥೆಯು ಐಸಿಎಂಆರ್ ಸಹಭಾಗಿತ್ವದಲ್ಲಿ ತಯಾರಿಸುತ್ತಿರುವ ಕೋವ್ಯಾಕ್ಸಿನ್ ಲಸಿಕೆಯು ಶೇ 60ರಷ್ಟು ಪರಿಣಾಮಕಾರಿಯಾಗಿದೆ ಎಂದು ಮೊದಲ ಮತ್ತು ಎರಡನೇ ಹಂತದ ಪ್ರಯೋಗದ ವಿವರಗಳನ್ನು ಮುಂದಿಟ್ಟು ಹೇಳಿಕೊಂಡಿದೆ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications