ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್-19 ಏರಿಕೆಗೆ ಯುವಜನರು ಹೆಚ್ಚು ಕಾರಣ: ಏಮ್ಸ್ ನಿರ್ದೇಶಕ

|
Google Oneindia Kannada News

ನವದೆಹಲಿ, ಏಪ್ರಿಲ್ 1: ಕೋವಿಡ್-19 ಪ್ರಕರಣಗಳ ಏರಿಕೆಗೆ ಯುವಜನರು ಹೆಚ್ಚಿನ ಪ್ರಮಾಣದಲ್ಲಿ ಕಾರಣಕರ್ತರಾಗುತ್ತಿದ್ದಾರೆ ಎಂದು ದೆಹಲಿಯಲ್ಲಿನ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಕೋವಿಡ್-19 ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದ್ದರೂ ಯುವಜನರು ಗುಂಪುಗೂಡಿ ಹೊರಗೆ ಹೋಗಿ ಜನರೊಂದಿಗೆ ಬೆರೆಯುತ್ತಿದ್ದಾರೆ. ತಮಗೆ ಸೋಂಕು ತಗುಲಿದರೂ ಅದರ ಪ್ರಭಾವ ಲಘುವಾಗಿರುತ್ತದೆ ಎಂಬ ಭಾವನೆಯ ಕಾರಣ ಅವರಲ್ಲಿ ಭಯ ಕಡಿಮೆಯಾಗಿದೆ. ಇದರಿಂದ ಅವರು ಕೋವಿಡ್ ತಡೆಗೆ ಅನುಸರಿಸಬೇಕಾದ ಕ್ರಮಗಳನ್ನು ಪಾಲಿಸುತ್ತಿಲ್ಲ ಎಂದು ಗುಲೇರಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಚಿಕಿತ್ಸೆಯಲ್ಲಿ ಗಾಯತ್ರಿ ಮಂತ್ರ ಪಠಣ, ಪ್ರಾಣಾಯಾಮ ಎಷ್ಟು ಪರಿಣಾಮಕಾರಿ?ಕೋವಿಡ್ ಚಿಕಿತ್ಸೆಯಲ್ಲಿ ಗಾಯತ್ರಿ ಮಂತ್ರ ಪಠಣ, ಪ್ರಾಣಾಯಾಮ ಎಷ್ಟು ಪರಿಣಾಮಕಾರಿ?

ಯುವಜನರಿಂದ ವಯಸ್ಕರ ಸಮೂಹಕ್ಕೆ ಸೋಂಕು ತಗುಲುವ ಅಪಾಯಗಳು ಅಧಿಕ. ಹೀಗಾಗಿ ವಯಸ್ಕರು ಹಾಗೂ ಆದ್ಯತೆಯ ವಯೋಮಾನದವರು ಲಸಿಕೆ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

 AIIMS Director Randeep Guleria Says Youngsters To Surge In Covid Cases

ಕೋವಿಡ್-19 ಸನ್ನಿವೇಶದ ಕುರಿತು ಚರ್ಚಿಸಲು ಬುಧವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ನೀತಿ ಆಯೋಗದ ಸದಸ್ಯ ಡಾ. ವಿಕೆ ಪೌಲ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಪಂಜಾಬ್ ಸರ್ಕಾರ ಮತ್ತು ಚಂಡೀಗಡ ಆಡಳಿತ ತೆಗೆದುಕೊಂಡ ಸಾರ್ವಜನಿಕ ಆರೋಗ್ಯ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

Recommended Video

ಕರ್ನಾಟಕ: ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಣೆ | Oneindia Kannada

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

English summary
AIIMS director Dr Randeep Guleria said youngsters are contributing to the rise in Covid-19 cases with their neglegence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X