ಗಗನಸಖಿಯರಿಗೆ ನೆಲ ತೋರಿಸಿದ ಏರ್ ಇಂಡಿಯಾ
ನವದೆಹಲಿ, ಮಾ.4: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆ ಮತ್ತೊಮ್ಮೆ ತನ್ನ ಕಠಿಣ ನಿಯಮಗಳ ಮೂಲಕ ಸುದ್ದಿಯಾಗಿದೆ. ಇತ್ತೀಚೆಗೆ ಕೆಲಸಕ್ಕೆ ತಡವಾಗಿ ಹಾಜರಾದ ಕಾರಣಕ್ಕೆ 10 ಮಂದಿ ಗಗನಸಖಿಯರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
ವಿಮಾನ ವಿಳಂಬವಾದ ಕಾರಣ ಕೆಲಸಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಗಗನಸಖಿಯರು ಪರಿಪರಿಯಾಗಿ ವಿವರಿಸಿದರೂ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಹಿರಿಯ ಅಧಿಕಾರಿಗಳ ಮನ ಕರಗಲಿಲ್ಲ ಎಂದು ತಿಳಿದು ಬಂದಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯಂತೆ ಗಗನಸಖಿಯರು ಕೆಲಸಕ್ಕೆ ವಿಳಂಬವಾಗಿ ಬರುವುದರಿಂದ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತಿದೆ. ವಿಮಾನಯಾನ ಸಿಬ್ಬಂದಿಗಳಿಗೂ ಕಷ್ಟವಾಗುತ್ತಿದೆ. ಅಲ್ಲದೆ ವಿಮಾನ ವಿಳಂಬದಿಂದಾಗಿ ಪ್ರಯಾಣಿಕರು ಕಷ್ಟ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.
ಈ ರೀತಿ ಕೆಲಸಕ್ಕೆ ತಡವಾಗಿ ಹಾಜರಾಗುವ ಗಗನಸಖಿಯರು ಹಾಗೂ ಇನ್ನಿತರ ವಿಮಾನ ಸಿಬ್ಬಂದಿಗಳ ಮೇಲೆ ಏರ್ ಇಂಡಿಯಾ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಮುಂತಾಗಿದ್ದು, ಇನ್ನಷ್ಟು ಮಂದಿ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಸದ್ಯಕ್ಕೆ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿ ಸಂಖ್ಯೆ 3,600ರಷ್ಟಿದೆ. ಮೊದಲ ಹಂತದಲ್ಲಿ ದೆಹಲಿ-ಶಿಕಾಗೋ ನಾನ್ ಸ್ಟಾಪ್ ವಿಮಾನ ವಿಳಂಬವಾದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ಗಗನಸಖಿಯರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಭಾನುವಾರ ಸಂಖೆ ಹೊತ್ತಿಗೆ ಇನ್ನೂ ಐದಾರು ಗಗನಸಖಿಗಳು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನಷ್ಟು ಮಂದಿಯನ್ನು ಮನೆಗೆ ಕಳಿಸಲು ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ವಿಮಾನ ವಿಳಂಬ ಹೊಸ ವಿಷಯವಲ್ಲ ಅದಕ್ಕೆ ನಾನಾ ಕಾರಣಗಳಿರಬಹುದು. ಆದರೆ, ವಿಮಾನ ವಿಳಂಬಕ್ಕೆ ಗಗನಸಖಿಯರು ಕೆಲಸಕ್ಕೆ ತಡವಾಗಿ ಹಾಜರಾಗಿರುವುದೇ ನೇರ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.ಫೆ.13ರಂದು ನಾಲ್ಕು ಗಗನಸಖಿಗಳು ಅಸ್ಟ್ರೇಲಿಯಾದ ವಿಮಾನದಲ್ಲಿ ಕರ್ತವ್ಯ ನಿರ್ವಹಿಸಲು ದೆಹಲಿಯ 3ನೇ ಟರ್ಮಿನಲ್ ಗೆ ತೆರಳಲು ವಿಳಂಬವಾಗಿದೆ.
ಒಬ್ಬ ಗಗನಸಖಿಯಂತೂ ಎರಡು ಗಂಟೆ ತಡವಾಗಿ ಕೆಲಸಕ್ಕೆ ಹಾಜರಾಗಿದ್ದು ಅಧಿಕಾರಗಳ ಪಿತ್ತ ನೆತ್ತಿಗೇರುವಂತೆ ಮಾಡಿದೆ. ಅಲ್ಲದೆ, ನಾನು ಈಗ ಆಸ್ಟ್ರೇಲಿಯಾಕ್ಕೆ ತೆರಳಲು ಸಾಧ್ಯವಿಲ್ಲ ದುಬೈ ಅಥವಾ ಹತ್ತಿರದ ನಗರಗಳಿಗೆ ತೆರಳುವ ವಿಮಾನ ಇದ್ದರೆ ಹೇಳಿ ಎಂದಿದ್ದಾರೆ. ಆಕೆಯನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಸುಮಾರು ವರ್ಷಗಳ ಹಿಂದೆ ಏರ್ ಇಂಡಿಯಾ ಸಂಸ್ಥೆಗೆ ತೋರ ಮೈಯ ಗಗನಸಖಿಯರು ಭಾರವೆನಿಸಿ ಹೊರಹಾಕಿದ್ದಾರೆ. ದಪ್ಪ ಶರೀರ ಹೊತ್ತ ಗಜಗಾಮನಿ ಗಗನಸಖಿಯರಿಗೆ ಪಿಂಕ್ ಸ್ಲಿಪ್ ವಿತರಣೆ ಕಾರ್ಯ ಹಮ್ಮಿಕೊಂಡಿತ್ತು.ದೇಶಿಯ ವಿಮಾನಯಾನದಲ್ಲಿ ಸೇವೆ ಸಲ್ಲಿಸುತ್ತಿದ್ದ 10 ಗಗನಸಖಿಯರಿಗೆ ಪಿಂಕ್ ಸ್ಲಿಪ್ ನೀಡಲಾಗಿತ್ತು. ತೂಕ ಇಳಿಸಿಕೊಳ್ಳಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಇದಲ್ಲದೆ ಪಿಂಕ್ ಸ್ಲಿಪ್ ಪಡೆದವರಿಗೆ ಬದಲಿ ಕೆಲಸ ನೀಡುವ ಆಹ್ವಾನವನ್ನು ಗಗನಸಖಿಯರು ತಿರಸ್ಕರಿಸಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications