'ಅಕ್ಷಯ್ ಕುಮಾರ್ ಓಕೆ, ಕತ್ರಿನಾ ಕೈಫ್ ನಾಟ್ ಓಕೆ ಯಾಕೆ?'
ನವದೆಹಲಿ, ಡಿಸೆಂಬರ್ 10: ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ಮಸೂದೆ ವಿರುದ್ಧ ಪ್ರತಿಭಟನೆಗಳು ಕೇಳಿಬರುತ್ತಿವೆ. ಮಸೂದೆ ಕುರಿತು ಹಲವರು ಹಲವು ರೀತಿಯ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಮಸೂದೆಯ ಪರವಾಗಿಯೂ ವಾದಗಳಿವೆ.
ಕಾಂಗ್ರೆಸ್ನ ಮುಖಂಡರೊಬ್ಬರು ಪೌರತ್ವ ಮಸೂದೆ (ಸಿಎಬಿ) ಬಗ್ಗೆ ಮಾಡಿರುವ ಟೀಕೆ, ವಿಡಂಬನಾತ್ಮಕ ಟೀಕೆ, ಮಸೂದೆಯಲ್ಲಿನ ಹುಳುಕಿನ ಬಗ್ಗೆಯೂ ಹೇಳುತ್ತಿದೆ.
ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಸಂಜಯ್ ನಿರುಪಮ್ ಪೌರತ್ವ ಮಸೂದೆ ಬಗ್ಗೆ ಮಾತನಾಡಿ, 'ಎನ್ಸಿಆರ್ (ನ್ಯಾಷನಲ್ ಸಿಟಿಜನ್ ರಿಜಿಸ್ಟ್ರೇಷನ್) ಎಂಬುವುದು ದೇಶದ ಜನರ ನೊಂದಣಿ ಆದರೆ ಸಿಎಬಿ (ಪೌರತ್ವ ಮಸೂದೆ) ಹಾಗಲ್ಲ, ಇದರ ಬಗ್ಗೆ ನಮ್ಮ ವಿರೋಧವಿದೆ' ಎಂದಿದ್ದಾರೆ.

ಪೌರತ್ವ ಮಸೂದೆಯಲ್ಲಿರುವ ತಾರತಮ್ಯದ ಬಗ್ಗೆ ಮಾತನಾಡಿರುವ ಅವರು, 'ಅಕ್ಷಯ್ ಕುಮಾರ್ ಗೆ ಒಂದು ನ್ಯಾಯ ಕತ್ರಿನಾ ಕೈಫ್ ಗೆ ಒಂದು ನ್ಯಾಯವಾ?' ಎಂದು ಪ್ರಶ್ನಿಸಿದ್ದಾರೆ.
'ನನ್ನ ಗೆಳೆಯ ಅಕ್ಷಯ್ ಕುಮಾರ್ ಕೆನಡಾದ ನಾಗರೀಕ, ಆತ ಭಾರತದ ನಾಗರೀಕನಾಗಲು ಬಯಸಿ ಅರ್ಜಿ ಸಲ್ಲಿಸಿದರೆ ಪೌರತ್ವ ಕಾಯ್ದೆಯ ಅಡಿ ಆತನಿಗೆ ಸರ್ಕಾರ ಅವಕಾಶ ನೀಡುತ್ತದೆ. ಅದೇ ನಟಿ ಕತ್ರೀನಾ ಕೈಫ್ ವಿದೇಶಿ ಪೌರತ್ವ ಹೊಂದಿರುವ ಮುಸ್ಲಿಂ, ಆಕೆಯನ್ನು ಹೊರದಬ್ಬಲಾಗುತ್ತದೆ' ಇದು ಯಾವ ರೀತಿಯ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.
ಪಾಕಿಸ್ತಾನ, ಅಪ್ಘನಿಸ್ತಾನ, ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿರುವ ನಿರಾಶ್ರಿತರನ್ನು ಹೊರಗಟ್ಟುವ ಮಸೂದೆ ಇದಾಗಿದೆ. ಮಸೂದೆಯು ಅಂಗೀಕಾರವಾದರೆ ಭಾರತದಲ್ಲಿರುವ ಬಾಂಗ್ಲಾ, ಪಾಕಿಸ್ತಾನ, ಅಪ್ಘಾನಿಸ್ತಾನ ಮುಸ್ಲಿಂರನ್ನು ಹೊರಗಟ್ಟಲಾಗುತ್ತದೆ. ಬೇರೆ ಧರ್ಮದವರನ್ನು ಹಾಗೆಯೇ ಉಳಿಸಿಕೊಳ್ಳಲಾಗುತ್ತದೆ.
ಈ ಮಸೂದೆಯು ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಮಾಡಿರುವ ಮಸೂದೆ ಎಂದು ಹಾಗೂ ಇದು ಸಂವಿಧಾನದ ಆಶಯದ ವಿರುದ್ಧವಾಗಿದೆಯೆಂದು ವಿಪಕ್ಷಗಳು ಆಕ್ಷೇಪ ಎತ್ತಿವೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications