'ಅಕ್ಷಯ್ ಕುಮಾರ್ ಓಕೆ, ಕತ್ರಿನಾ ಕೈಫ್ ನಾಟ್ ಓಕೆ ಯಾಕೆ?'
ನವದೆಹಲಿ, ಡಿಸೆಂಬರ್ 10: ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ಮಸೂದೆ ವಿರುದ್ಧ ಪ್ರತಿಭಟನೆಗಳು ಕೇಳಿಬರುತ್ತಿವೆ. ಮಸೂದೆ ಕುರಿತು ಹಲವರು ಹಲವು ರೀತಿಯ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಮಸೂದೆಯ ಪರವಾಗಿಯೂ ವಾದಗಳಿವೆ.
ಕಾಂಗ್ರೆಸ್ನ ಮುಖಂಡರೊಬ್ಬರು ಪೌರತ್ವ ಮಸೂದೆ (ಸಿಎಬಿ) ಬಗ್ಗೆ ಮಾಡಿರುವ ಟೀಕೆ, ವಿಡಂಬನಾತ್ಮಕ ಟೀಕೆ, ಮಸೂದೆಯಲ್ಲಿನ ಹುಳುಕಿನ ಬಗ್ಗೆಯೂ ಹೇಳುತ್ತಿದೆ.
ಕಾಂಗ್ರೆಸ್ ಮುಖಂಡ ಮಾಜಿ ಸಂಸದ ಸಂಜಯ್ ನಿರುಪಮ್ ಪೌರತ್ವ ಮಸೂದೆ ಬಗ್ಗೆ ಮಾತನಾಡಿ, 'ಎನ್ಸಿಆರ್ (ನ್ಯಾಷನಲ್ ಸಿಟಿಜನ್ ರಿಜಿಸ್ಟ್ರೇಷನ್) ಎಂಬುವುದು ದೇಶದ ಜನರ ನೊಂದಣಿ ಆದರೆ ಸಿಎಬಿ (ಪೌರತ್ವ ಮಸೂದೆ) ಹಾಗಲ್ಲ, ಇದರ ಬಗ್ಗೆ ನಮ್ಮ ವಿರೋಧವಿದೆ' ಎಂದಿದ್ದಾರೆ.

ಪೌರತ್ವ ಮಸೂದೆಯಲ್ಲಿರುವ ತಾರತಮ್ಯದ ಬಗ್ಗೆ ಮಾತನಾಡಿರುವ ಅವರು, 'ಅಕ್ಷಯ್ ಕುಮಾರ್ ಗೆ ಒಂದು ನ್ಯಾಯ ಕತ್ರಿನಾ ಕೈಫ್ ಗೆ ಒಂದು ನ್ಯಾಯವಾ?' ಎಂದು ಪ್ರಶ್ನಿಸಿದ್ದಾರೆ.
'ನನ್ನ ಗೆಳೆಯ ಅಕ್ಷಯ್ ಕುಮಾರ್ ಕೆನಡಾದ ನಾಗರೀಕ, ಆತ ಭಾರತದ ನಾಗರೀಕನಾಗಲು ಬಯಸಿ ಅರ್ಜಿ ಸಲ್ಲಿಸಿದರೆ ಪೌರತ್ವ ಕಾಯ್ದೆಯ ಅಡಿ ಆತನಿಗೆ ಸರ್ಕಾರ ಅವಕಾಶ ನೀಡುತ್ತದೆ. ಅದೇ ನಟಿ ಕತ್ರೀನಾ ಕೈಫ್ ವಿದೇಶಿ ಪೌರತ್ವ ಹೊಂದಿರುವ ಮುಸ್ಲಿಂ, ಆಕೆಯನ್ನು ಹೊರದಬ್ಬಲಾಗುತ್ತದೆ' ಇದು ಯಾವ ರೀತಿಯ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.
ಪಾಕಿಸ್ತಾನ, ಅಪ್ಘನಿಸ್ತಾನ, ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿರುವ ನಿರಾಶ್ರಿತರನ್ನು ಹೊರಗಟ್ಟುವ ಮಸೂದೆ ಇದಾಗಿದೆ. ಮಸೂದೆಯು ಅಂಗೀಕಾರವಾದರೆ ಭಾರತದಲ್ಲಿರುವ ಬಾಂಗ್ಲಾ, ಪಾಕಿಸ್ತಾನ, ಅಪ್ಘಾನಿಸ್ತಾನ ಮುಸ್ಲಿಂರನ್ನು ಹೊರಗಟ್ಟಲಾಗುತ್ತದೆ. ಬೇರೆ ಧರ್ಮದವರನ್ನು ಹಾಗೆಯೇ ಉಳಿಸಿಕೊಳ್ಳಲಾಗುತ್ತದೆ.
ಈ ಮಸೂದೆಯು ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಮಾಡಿರುವ ಮಸೂದೆ ಎಂದು ಹಾಗೂ ಇದು ಸಂವಿಧಾನದ ಆಶಯದ ವಿರುದ್ಧವಾಗಿದೆಯೆಂದು ವಿಪಕ್ಷಗಳು ಆಕ್ಷೇಪ ಎತ್ತಿವೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications