ನವದೆಹಲಿಯಲ್ಲಿ ಅಲ್ ಖೈದಾ ಉಗ್ರನ ಬಂಧನ
ದೆಹಲಿಯಲ್ಲಿಶಮಿ-ಉರ್-ರಹಮಾನ್ ಎಂಬ ಅಲ್ ಖೈದಾ ಉಗ್ರನ ಸೆರೆ. ಈಶಾನ್ಯ ರಾಜ್ಯದ ಜನರನ್ನು ಸಂಘಟನೆಗೆ ಸೇರಿಸಲು ಭಾರತಕ್ಕೆ ಬಂದಿದ್ದ ಉಗ್ರ.
ನವದೆಹಲಿ, ಸೆಪ್ಟೆಂಬರ್ 18: ಭಾರತದ ಈಶಾನ್ಯ ರಾಜ್ಯಗಳಲ್ಲಿರುವ ಕೆಲವು ಜನರನ್ನು ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿಸುವ ಪ್ರಯತ್ನದಲ್ಲಿ ನಿರತನಾಗಿದ್ದ ಅದೇ ಉಗ್ರ ಸಂಘಟನೆಯ ಏಜೆಂಟ್ ಒಬ್ಬನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಶಮಿ-ಉರ್-ರಹಮಾನ್ ಎಂದು ಗುರುತಿಸಲಾಗಿದೆ.
ಉಗ್ರನ ಬಂಧನದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಪೊಲೀಸ್ ಇಲಾಖೆಯ ಡಿಸಿಪಿ ಪಿ. ಕುಶ್ವಾಹಾ, '' ಶಮಿಯನ್ನು ಪೂರ್ವ ದೆಹಲಿಯಲ್ಲಿನ ವಿಕಾಸ್ ಮಾರ್ಗ್ ನಲ್ಲಿರುವ ಶಂಕರಪುರ ಬಸ್ ಸ್ಟಾಂಡ್ ನಲ್ಲಿ ಬಂಧಿಸಲಾಗಿದೆ'' ಎಂದು ತಿಳಿಸಿದರು.

ಬಂಧಿತನಿಂದ ಒಂದು ಪಿಸ್ತೂಲು, 9 ಎಂಎಂ ಗುಂಡುಗಳು, ಲ್ಯಾಪ್ ಟಾಪ್, ಮೊಬೈಲ್ ಫೋನ್, ಒಂದು ಬಾಂಗ್ಲಾದೇಶಿ ಸಿಮ್ ಕಾರ್ಡ್ ಹಾಗೂ ಬಾಂಗ್ಲಾದೇಶದ ಕರೆನ್ಸಿ ಹಾಗೂ ಅಮೆರಿಕದ ಡಾಲರ್ ಗಳು ಪತ್ತೆಯಾಗಿವೆ ಎಂದು ಕುಶ್ವಾಹಾ ತಿಳಿಸಿದ್ದಾರೆ.
ಶಮಿಯು ಬಾಂಗ್ಲಾದ ಮೂಲದವನೇ ಆಗಿದ್ದು, ಬ್ರಿಟನ್ ಪೌರತ್ವ ಹೊಂದಿದ್ದಾನೆ ಎಂದ ಕುಶ್ವಾಹಾ, ಈತ ಈಶಾನ್ಯ ರಾಜ್ಯಗಳ ಪ್ರಜೆಗಳನ್ನು ಅದರಲ್ಲೂ ಮುಖ್ಯವಾಗಿ ಭಾರತದೊಳಗೆ ನಿರಾಶ್ರಿತರಾಗಿ ಬಂದು ನೆಲೆಸಿರುವ ರೋಹಿಂಗ್ಯ ಮುಸ್ಲಿಮರನ್ನು ತನ್ನ ಸಂಘಟನೆಗೆ ಸೇರಿಸಲು ಭಾರತಕ್ಕೆ ಬಂದಿದ್ದ ಎಂದು ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications