ನವದೆಹಲಿಯಲ್ಲಿ ಅಲ್ ಖೈದಾ ಉಗ್ರನ ಬಂಧನ
ದೆಹಲಿಯಲ್ಲಿಶಮಿ-ಉರ್-ರಹಮಾನ್ ಎಂಬ ಅಲ್ ಖೈದಾ ಉಗ್ರನ ಸೆರೆ. ಈಶಾನ್ಯ ರಾಜ್ಯದ ಜನರನ್ನು ಸಂಘಟನೆಗೆ ಸೇರಿಸಲು ಭಾರತಕ್ಕೆ ಬಂದಿದ್ದ ಉಗ್ರ.
ನವದೆಹಲಿ, ಸೆಪ್ಟೆಂಬರ್ 18: ಭಾರತದ ಈಶಾನ್ಯ ರಾಜ್ಯಗಳಲ್ಲಿರುವ ಕೆಲವು ಜನರನ್ನು ಅಲ್ ಖೈದಾ ಉಗ್ರ ಸಂಘಟನೆಗೆ ಸೇರಿಸುವ ಪ್ರಯತ್ನದಲ್ಲಿ ನಿರತನಾಗಿದ್ದ ಅದೇ ಉಗ್ರ ಸಂಘಟನೆಯ ಏಜೆಂಟ್ ಒಬ್ಬನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ಶಮಿ-ಉರ್-ರಹಮಾನ್ ಎಂದು ಗುರುತಿಸಲಾಗಿದೆ.
ಉಗ್ರನ ಬಂಧನದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಪೊಲೀಸ್ ಇಲಾಖೆಯ ಡಿಸಿಪಿ ಪಿ. ಕುಶ್ವಾಹಾ, '' ಶಮಿಯನ್ನು ಪೂರ್ವ ದೆಹಲಿಯಲ್ಲಿನ ವಿಕಾಸ್ ಮಾರ್ಗ್ ನಲ್ಲಿರುವ ಶಂಕರಪುರ ಬಸ್ ಸ್ಟಾಂಡ್ ನಲ್ಲಿ ಬಂಧಿಸಲಾಗಿದೆ'' ಎಂದು ತಿಳಿಸಿದರು.

ಬಂಧಿತನಿಂದ ಒಂದು ಪಿಸ್ತೂಲು, 9 ಎಂಎಂ ಗುಂಡುಗಳು, ಲ್ಯಾಪ್ ಟಾಪ್, ಮೊಬೈಲ್ ಫೋನ್, ಒಂದು ಬಾಂಗ್ಲಾದೇಶಿ ಸಿಮ್ ಕಾರ್ಡ್ ಹಾಗೂ ಬಾಂಗ್ಲಾದೇಶದ ಕರೆನ್ಸಿ ಹಾಗೂ ಅಮೆರಿಕದ ಡಾಲರ್ ಗಳು ಪತ್ತೆಯಾಗಿವೆ ಎಂದು ಕುಶ್ವಾಹಾ ತಿಳಿಸಿದ್ದಾರೆ.
ಶಮಿಯು ಬಾಂಗ್ಲಾದ ಮೂಲದವನೇ ಆಗಿದ್ದು, ಬ್ರಿಟನ್ ಪೌರತ್ವ ಹೊಂದಿದ್ದಾನೆ ಎಂದ ಕುಶ್ವಾಹಾ, ಈತ ಈಶಾನ್ಯ ರಾಜ್ಯಗಳ ಪ್ರಜೆಗಳನ್ನು ಅದರಲ್ಲೂ ಮುಖ್ಯವಾಗಿ ಭಾರತದೊಳಗೆ ನಿರಾಶ್ರಿತರಾಗಿ ಬಂದು ನೆಲೆಸಿರುವ ರೋಹಿಂಗ್ಯ ಮುಸ್ಲಿಮರನ್ನು ತನ್ನ ಸಂಘಟನೆಗೆ ಸೇರಿಸಲು ಭಾರತಕ್ಕೆ ಬಂದಿದ್ದ ಎಂದು ಹೇಳಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications