ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಫೇಲ್‌ ಬಗ್ಗೆ ಬಿಜೆಪಿ ಮಾಜಿ ಸಚಿವರ ಆರೋಪ ಸುಳ್ಳು ಎಂದ ಜೇಟ್ಲಿ

By Manjunatha
|
Google Oneindia Kannada News

ನವದೆಹಲಿ, ಆಗಸ್ಟ್ 09: ರಫೇಲ್ ಹಗರಣದ ಬಗ್ಗೆ ನಿನ್ನೆ ಬಿಜೆಪಿ ಮಾಜಿ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಮತ್ತು ಸುಪ್ರಿಂ ವಕೀಲ ಪ್ರಶಾಂತ್ ಭೂಷಣ್ ಅವರು ರಫೇಲ್ ಹಗರಣದ ಬಗ್ಗೆ ಮಾಡಿದ್ದ ಆರೋಪಗಳಲ್ಲಿ ಲವಲೇಶದಷ್ಟೂ ಸತ್ಯವಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ರಿಯ ರಾಜಕಾರಣದಲ್ಲಿ ಅವರಿಗೆ ಆದ್ಯತೆ ಸಿಗದ ಕಾರಣ ತಮ್ಮ ಇರುವಿಕೆಯನ್ನು ಸಾಬೀತು ಮಾಡಲೆಂದು ಸರ್ಕಾರದ ವಿರುದ್ಧ ಸಂಸ್ಕರಿಸಿದ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

58 ಸಾವಿರ ಕೋಟಿಯ ರಫೇಲ್ ಡೀಲ್, ಅದರ ಸುತ್ತ- ಮುತ್ತ, ಎತ್ತ?58 ಸಾವಿರ ಕೋಟಿಯ ರಫೇಲ್ ಡೀಲ್, ಅದರ ಸುತ್ತ- ಮುತ್ತ, ಎತ್ತ?

ಯಶವಂತ ಸಿನ್ಹಾ, ಅರುಣ್ ಶೌರಿ, ಪ್ರಶಾಂತ್ ಭೂಷಣ್ ಅವರ ಹೆಸರು ಹೇಳದೆ ಜರಿದಿರುವ ಜೇಟ್ಲಿ ಸರ್ಕಾರದ ಗೌರವಕ್ಕೆ ಮಸಿ ಬಳಿಯಲೆಂದು ಅವರು ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದಿದ್ದಾರೆ.

allegations about Rafael is processed lie: Arun Jaitley

ಬಿಜೆಪಿ ಮಾಜಿ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿ ಮತ್ತು ಸುಪ್ರಿಂ ವಕೀಲ ಪ್ರಶಾಂತ್ ಭೂಷಣ್ ಅವರು, ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ರಫೇಲ್ ಹಗರಣವು ಭಾರತೀಯ ರಕ್ಷಣಾ ಇಲಾಖೆ ಇತಿಹಾಸದಲ್ಲೇ ಅತಿ ದೊಡ್ಡ ಹಗರಣ ಎಂದು ಆರೋಪಿಸಿದ್ದರು.

allegations about Rafael is processed lie: Arun Jaitley

ರಫೇಲ್ ಹಗರಣ: ಮಾಜಿ ಬಿಜೆಪಿ ಸಚಿವರಿಂದಲೇ ಕೇಂದ್ರಕ್ಕೆ ತಪರಾಕಿರಫೇಲ್ ಹಗರಣ: ಮಾಜಿ ಬಿಜೆಪಿ ಸಚಿವರಿಂದಲೇ ಕೇಂದ್ರಕ್ಕೆ ತಪರಾಕಿ

ಇದೇ ಆರೋಪಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್, ಒಪ್ಪಂದವನ್ನು ರಾಷ್ಟ್ರದ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡೆ ಮಾಡಿಕೊಳ್ಳಲಾಗಿದೆ. ವಿರೋಧ ಪಕ್ಷಗಳು ಮತ್ತು ಕೆಲವರು ಸರ್ಕಾರವನ್ನು ಭ್ರಷ್ಟವೆಂದು ತೋರಿಸಲು ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

English summary
Allegations which made by BJP ex-ministers Yashwant Sinha, Arun Showri and Prashant Bhushan about Rafale was reprocessed lies says central minister Arun Jaitley.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X