ಮೊಬೈಲ್ ಆರ್ಡರ್ ರದ್ದಾಗಿದೆ ಎಂದು ವಂಚಿಸಿದ ಅಮೇಜಾನ್ ಡೆಲಿವರಿ ಬಾಯ್
ನವದೆಹಲಿ, ಅಕ್ಟೋಬರ್ 21: ಇ-ಕಾಮರ್ಸ್ ತಾಣದಿಂದ ಖರೀದಿಸಿದ ಮೊಬೈಲ್ ಫೋನ್ ಅನ್ನು ಗ್ರಾಹಕರೊಬ್ಬರಿಗೆ ತಲುಪಿಸದೆ ವಂಚನೆ ಮಾಡಿದ ಆರೋಪದಡಿ ಅಮೇಜಾನ್ ಡೆಲಿವರಿ ಬಾಯ್ನನ್ನು ಪೊಲೀಸರು ಬಂಧಿಸಿದ್ದಾರೆ.
ಮೊಬೈಲ್ ಫೋನ್ಅನ್ನು ಡೆಲಿವರಿ ಮಾಡುವ ಬದಲು 22 ವರ್ಷದ ಯುವಕ, ಆರ್ಡರ್ ಅನ್ನು ರದ್ದು ಮಾಡಲಾಗಿದೆ ಎಂದು ಹೇಳಿ ಆ ಫೋನ್ಅನ್ನು ತಾನೇ ಇರಿಸಿಕೊಂಡಿದ್ದ. ಈ ಸಂಬಂಧ ಗ್ರಾಹಕ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಬೇರೊಬ್ಬ ವ್ಯಕ್ತಿಯಿಂದ ಆ ಫೋನನ್ನು ವಶಪಡಿಸಿಕೊಂಡಿದ್ದಾರೆ. ಡೆಲಿವರಿ ಬಾಯ್ ಆ ಫೋನನ್ನು ಮತ್ತೊಬ್ಬರಿಗೆ ಮಾರಾಟ ಮಾಡಿ ಅವರಿಂದ ಹಣ ಪಡೆದುಕೊಂಡಿದ್ದ.
ಅಮೇಜಾನ್ನಲ್ಲಿ ಕೆಲಸ ಮಾಡುವ ಡೆಲಿವರಿ ಬಾಯ್ ವಿರುದ್ಧ ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಲಾಗಿತ್ತು. ಅಕ್ಟೋಬರ್ 1ರಂದು ಮೊಬೈಲ್ ಫೋನ್ ಆರ್ಡರ್ ಮಾಡಿದ್ದ ವ್ಯಕ್ತಿ ಕಿದ್ವಾಯಿ ನಗರದಲ್ಲಿರುವ ಮನೆಗೆ ಬಂದಿದ್ದ ಡೆಲಿವರಿ ಬಾಯ್, ನಿಮ್ಮ ಆರ್ಡರ್ ರದ್ದಾಗಿದೆ. ಶೀಘ್ರದಲ್ಲಿಯೇ ನಿಮ್ಮ ದುಡ್ಡು ವಾಪಸ್ ಬರಲಿದೆ ಎಂದು ಹೇಳಿದ್ದ. ಅವರು ಅಮೇಜಾನ್ ತಾಣದಲ್ಲಿ ಪರಿಶೀಲಿಸಿದಾಗ ಮೊಬೈಲ್ ಫೋನ್ ಗ್ರಾಹಕರಿಗೆ ಡೆಲಿವರಿಗೆ ಆಗಿದೆ ಎಂದು ತೋರಿಸುತ್ತಿತ್ತು.

ಕೂಡಲೇ ಅವರು ಅಮೇಜಾನ್ ಗ್ರಾಹಕ ವೇದಿಕೆಯನ್ನು ಸಂಪರ್ಕಿಸಿ ತಮ್ಮ ಹಣ ವಾಪಸ್ ನೀಡುವಂತೆ ಕೇಳಿದರು. ಪರಿಶೀಲನೆ ನಡೆಸಿದ ಕಂಪೆನಿ, ನಿಮ್ಮ ಫೋನ್ ಈಗಾಗಲೇ ಡೆಲಿವರಿ ಆಗಿದೆ ಎಂದು ತಿಳಿಸಿತ್ತು. ನಂತರ ಆ ಗ್ರಾಹಕ ಕಿದ್ವಾಯಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೀರ್ತಿನಗರದ ಜವಾಹರ್ ಕ್ಯಾಂಪ್ನ ನಿವಾಸಿಯಾಗಿರುವ ಡೆಲಿವರಿ ಬಾಯ್ ಮನೋಜ್ ವಿರುದ್ಧ ಐಪಿಸಿ ಸೆಕ್ಷನ್ 420ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಣದ ಅವಶ್ಯಕತೆ ಇದ್ದಿದ್ದರಿಂದ ಈ ರೀತಿ ವಂಚನೆ ಮಾಡಿದ್ದಾಗಿ ಆತ ತಿಳಿಸಿದ್ದಾನೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications