ಭಾರತೀಯ ಸೇನೆ ಕೈಸೇರಿದ ಅಮೆರಿಕದ ಅತ್ಯಾಧುನಿಕ ರೈಫಲ್ಸ್
ನವದೆಹಲಿ, ಡಿಸೆಂಬರ್ 15: ಭಾರತೀಯ ಸೇನೆಗೆ ಸುಮಾರು 15 ವರ್ಷಗಳ ಬಳಿಕ ಅಮೆರಿಕ ನಿರ್ಮಿತ ಅತ್ಯಾಧುನಿಕ ಎಸ್ಐಜಿ-716 ಅಸಾಲ್ಟ್ ರೈಫಲ್ ಪೂರೈಕೆಯಾಗುತ್ತಿದೆ. ಒಟ್ಟು 72,400 ರೈಫಲ್ಸ್ ಗಳಲ್ಲಿ ಈಗಾಗಲೇ 10 ಸಾವಿರ ಎಸ್ಐಜಿ-716 ರೈಫಲ್ಸ್ ಭಾರತೀಯ ಸೇನೆ ಈಗಾಗಲೇ ಸ್ವೀಕರಿಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಅತೀ ದೂರದ ಗುರಿ ತಲುಪುವ ಸಾಮರ್ಥ್ಯ ಹೊಂದಿರುವ ಈ ರೈಫಲ್ ಗಳನ್ನು ಪಾಕಿಸ್ತಾನ ಮತ್ತು ಚೀನಾ ಗಡಿಯಲ್ಲಿನ ಮುಂಚುಣಿ ನೆಲೆಗಳಲ್ಲಿರುವ ಸೈನಿಕರಿಗೆ ಮಾತ್ರ ಕೊಡಲು ನಿರ್ಧರಿಸಿದೆ. ಉಳಿದ ಸೈನಿಕರಿಗೆ ರಷ್ಯಾ ಸಹಭಾಗಿತ್ವದಲ್ಲಿ ತಯಾರಿಸಲಾಗುತ್ತಿರುವ ಕಲಾಶ್ನಿಕೋವ್ ರೈಫಲ್ ಗಳನ್ನು ಮುಂದಿನ ಹಂತದಲ್ಲಿ ನೀಡಲಾಗುತ್ತದೆ.
ಪ್ರಸ್ತುತವಾಗಿ ಬಳಸಲಾಗುತ್ತಿರುವ 5.56 ಎಂಎಂ ಇನ್ಸಾಸ್ ರೈಫಲ್ ಗಳನ್ನು ಬದಲಾವಣೆ ಮಾಡಲು ಸೇನೆ 2005 ರಲ್ಲಿ ಬೇಡಿಕೆ ಇಟ್ಟಿತ್ತು. ಒಟ್ಟು 382 ಬೆಟಾಲಿಯನ್ ಗಳಿಗೆ (ಪ್ರತಿಯೊಂದರಲ್ಲಿಯೂ 850 ಸೈನಿಕರು) ಅತ್ಯಾಧುನಿಕ ಗನ್ ಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಭ್ರಷ್ಟಾಚಾರ ಆರೋಪಗಳಿಂದ ರೈಫಲ್ ಖರೀದಿ ಒಪ್ಪಂದ ವಿಳಂಬವಾಗಿತ್ತು.

ಈಗ ಸುಮಾರು 15 ವರ್ಷಗಳ ಬಳಿಕ ಎಸ್ಐಜಿ-716 ಅಸಾಲ್ಟ್ ರೈಫಲ್ ಭಾರತೀಯ ಸೇನೆಯ ಬತ್ತಳಿಕೆಗೆ ಬರುತ್ತಿದೆ. ನಿರ್ಣಾಯಕ ಕಾರ್ಯಾಚರಣೆಗಳ ಅವಶ್ಯಕತೆಗಳಿಗಾಗಿ ಭಾರತವು ಅಮೆರಿಕದ ಎಸ್ಐಜಿ ಸೌರ್ ಸಂಸ್ಥೆಯಿಂದ 72,400 ಅಸಾಲ್ಟ್ ರೈಫಲ್ಸ್ ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications