ರೈತರ ಹೋರಾಟ: ದೆಹಲಿಯಲ್ಲಿ ಸಂಚಾರದ ಕುರಿತು ಪೊಲೀಸರ ಮಾರ್ಗಸೂಚಿ
ನವದೆಹಲಿ, ಡಿಸೆಂಬರ್.04: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆ ವಿರುದ್ಧ ರೈತರ ಹೋರಾಟ 9ನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿಯಲ್ಲಿ ಹಲವು ಭಾಗಗಳ ರಸ್ತೆ ಸಂಚಾರ ಬಂದ್ ಆಗಿದ್ದು, ಈ ಕುರಿತು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಹರಿಯಾಣ, ಉತ್ತರ ಪ್ರದೇಶ ಮತ್ತು ದೆಹಲಿಗೆ ಸಂಪರ್ಕಿಸುವ ಗಡಿ ಭಾಗದ ರಸ್ತೆಗಳಲ್ಲಿ ರೈತರ ಜಮಾಯಿಸಿದ್ದು, ಈ ಮಾರ್ಗದಲ್ಲಿ ವಾಹನ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇದರ ನಡುವೆ ದೆಹಲಿಯ ಹಲವು ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದಾರೆ.
ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ಆಗಮಿಸುವ ಮತ್ತು ನಿರ್ಗಮಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ. ದೆಹಲಿಯ ಸಿಂಘು ಮತ್ತು ಟಿಕ್ರಿ ಗಡಿ ಪ್ರದೇಶದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ದೆಹಲಿ ಸಂಚಾರ ವ್ಯವಸ್ಥೆ ಕುರಿತು ಮಾಹಿತಿ:
ಘಜಿಯಾಬಾದ್ನಿಂದ ದೆಹಲಿಗೆ ಆಗಮಿಸುವ ಪ್ರಯಾಣಿಕರು ಘಾಜಿಪುರ ಗಡಿಯ ರಾಷ್ಟ್ರೀಯ ಹೆದ್ದಾರಿ 24ರ ಮಾರ್ಗವಾಗಿ ಅಪ್ಸರಾ, ಭೋಪ್ರಾ ಮಾರ್ಗವನ್ನು ಬಳಸಿಕೊಂಡು ಪ್ರಯಾಣಿಸುವಂತೆ ಸಂಚಾರಿ ಪೊಲೀಸರು ಸಲಹೆ ನೀಡಿದ್ದಾರೆ. ಟಿಕ್ರಿ, ಝರೋಡಾ ಗಡಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬದುಸರೈ ಗಡಿ ಭಾಗದ ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳಂತ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ಝತಿಕಾರಾ ಗಡಿ ರಸ್ತೆಗಳಲ್ಲಿ ಕೇವಲ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅನುಮತಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಸಿಂಘು, ಲಂಪುರ್, ಔಚಂಡಿ, ಸಫಿಯಾಬಾದ್, ಪಿಯಾವೋ ಮನಿಯಾರಿ ಮತ್ತು ಸಬೋಲಿ ಗಡಿಗಳನ್ನು ಬಂದ್ ಮಾಡಲಾಗಿದ್ದು, ರಾಷ್ಟ್ರ ಹೆದ್ದಾರಿ 44ರಲ್ಲಿ ದ್ವಿಮುಖ ಸಂಚಾರವನ್ನು ಬಂದ್ ಮಾಡಲಾಗಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications