"ಹಬ್ಬದ ಖುಷಿಯಲ್ಲಿ ಮಾಸ್ಕ್ ಮರೆತರೆ ಅಪಾಯ ತಪ್ಪಿದ್ದಲ್ಲ"
ನವದೆಹಲಿ, ಅಕ್ಟೋಬರ್.08: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೇ ದೇಶಾದ್ಯಂತ ಸಾಲು ಸಾಲು ಹಬ್ಬಗಳು ಎದುರಾಗಿದೆ. ಹಬ್ಬ ಆಚರಣೆಯ ಖುಷಿಯಲ್ಲಿ ಯಾವುದೇ ಕಾರಣಕ್ಕೂ ಮೈ ಮರೆಯುವುದು ಬೇಡ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಎಚ್ಚರಿಕೆ ನೀಡಿದ್ದಾರೆ.
ದೇಶಾದ್ಯಂತ ದಸರಾ, ದುರ್ಗಾ ಪೂಜೆ, ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಿ. ಆದರೆ ಇದರ ಸಂಭ್ರಮದಲ್ಲಿ ಮಾಸ್ಕ್ ಗಳನ್ನು ಮರೆಯುವುದು ಬೇಡ. ಹಬ್ಬದ ನಡುವೆಯೂ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಬೇಕು.
ಸಾರ್ವಜನಿಕರು ಮಾಸ್ಕ್ ಧರಿಸುವ ರೀತಿ ಕೂಡಾ ಇಲ್ಲಿ ಬಹುಮುಖ್ಯವಾಗಿರುತ್ತದೆ. ಸರಿಯಾಗಿ ಮೂಗು ಮುಚ್ಚಿಕೊಳ್ಳುವಂತೆ ಮಾಸ್ಕ್ ಗಳನ್ನು ಧರಿಸುವುದು ಹೆಚ್ಚು ಸುರಕ್ಷಿತವಾಗಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಿಂಗ್ ಸಲಹೆ ನೀಡಿದ್ದಾರೆ.

ಸಾಮಾಜಿಕ ಅಂತರದ ಬಗ್ಗೆ ಗಮನವಿರಲಿ:
ಭಾರತದಲ್ಲಿ ಹಬ್ಬವನ್ನು ಆಚರಿಸುವುದಕ್ಕೆ ಮುಕ್ತ ಅವಕಾಶವನ್ನು ನೀಡಲಾಗುತ್ತದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಹೀಗಿದ್ದರೂ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ತುರ್ತು ಅಗತ್ಯವಾಗಿದೆ. ಮುಖಕ್ಕೆ ಮಾಸ್ಕ್ ಧರಿಸುವುದರ ಜೊತೆಗೆ ಕೈಗಳಿಗೆ ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರಾ ಅಗತ್ಯ ಎನಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 78524 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 68,35,656ಕ್ಕೆ ಏರಿಕೆಯಾಗಿದೆ. ದೇಶದ್ಯಂತ 58,27,705 ಸೋಂಕಿತರು ಗುಣಮುಖರಾಗಿದ್ದು, 9,02,425 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications