ಕರ್ನಾಟಕ ಚುನಾವಣೆ: ಮಾಳವೀಯ ಟ್ವೀಟ್ ವಿವಾದಕ್ಕೆ ಬಿಜೆಪಿ ಸ್ಪಷ್ಟೀಕರಣ
ನವದೆಹಲಿ, ಮಾರ್ಚ್ 27: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಚುನಾವಣಾ ಆಯೋಗಕ್ಕೂ ಮೊದಲೇ ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಿದ್ದರು ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸ್ಪಷ್ಟೀಕರಣ ನೀಡದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
"ಅಮಿತ್ ಮಾಳವೀಯ ಅವರ ಟ್ವೀಟ್ ಟಿವಿ ಚಾನೆಲ್ ವೊಂದರ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಮಾಡಿದ್ದು. ಇದರಲ್ಲಿ ಚುನಾವಣಾ ಆಯೋಗದ ಘನತೆಯನ್ನು ಕಳೆಯುವಂಥದ್ದೂ ಏನೂ ಇಲ್ಲ. ಕರ್ನಾಟಕದ ಮುಖಂಡರೊಬ್ಬರೂ ಇದೇ ಸಮಯದಲ್ಲಿ ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದರು. ಹಾಗೆಂದು ನಾವು ಮಾಳವೀಯ ಅವರು ಮಾಡಿದ್ದು ಸರಿ ಎಂದು ಸಮರ್ಥಿಸಿಕೊಳ್ಳುತ್ತಿಲ್ಲ" ಎಂದ ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
Amit Malviya's tweet was based on a TV channel's source. It had no intention to undermine the stature of EC. A Karnataka Congress leader had also tweeted the same thing. We agree that he (Malviya) shouldn't have tweeted it: Mukhtar Abbas Naqvi, BJP after meeting with EC officials pic.twitter.com/McqxhsUZCT
— ANI (@ANI) March 27, 2018
ಇಂದು(ಮಾ.27) ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಘೋಷಣೆ ಮಾಡಿತ್ತು. ಆದರೆ ಆಯೋಗ ದಿನಾಂಕ ಘೋಷಿಸುವ ಕೆಲವು ಸಮಯ ಮೊದಲೇ ಚುನಾವಣೆಯ ನಿಖರ ದಿನಾಂಕ(ಮೇ 12)ವನ್ನು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದರು. ಆದರೆ ಫಲಿತಾಂಶದ ದಿನವನ್ನು ಮೇ 15 ರ ಬದಲಾಗಿ ಮೇ 18 ಎಂದು ತಪ್ಪಾಗಿ ಟ್ವೀಟ್ ಮಾಡಿದ್ದರು.
ಚುನಾವಣಾ ಆಯೋಗ ಯಾವ ಪಕ್ಷ, ಸರ್ಕಾರದ ಭಾಗವೂ ಆಗಿರದ ಒಂದು ಸ್ವತಂತ್ರ ಸಂಸ್ಥೆ. ಆದರೆ ಚುನಾವಣಾ ಆಯೋಗ ಇಂಥ ದಿನವೇ ದಿನಾಂಕ ಘೋಷಿಸುತ್ತದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥರಿಗೆ ಮೊದಲೇ ಗೊತ್ತಿದ್ದುದು ಹೇಗೆ ಎಂದು ಟ್ವಿಟ್ಟರ್ ನಲ್ಲಿ ಸಾಕಷ್ಟು ವಾದ ವಿವಾದಗಳು ಎದ್ದಿದ್ದವು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications