ಅಮಿತ್ ಶಾ ರನ್ನು ಮೊಹಮ್ಮದ್ ಅಲಿ ಜಿನ್ನಾಗೆ ಹೋಲಿಸಿದ ಇತಿಹಾಸಜ್ಞ ಗುಹಾ
ಬೆಂಗಳೂರು, ಸೆಪ್ಟೆಂಬರ್ 15: ಪಾಕಿಸ್ತಾನ ರಾಷ್ಟ್ರ ನಾಯಕ ಮೊಹಮ್ಮದ್ ಅಲಿ ಜಿನ್ನಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೂ ಹೋಲಿಕೆ ಇದೆ ಎಂದು ಕ್ಯಾತ ಇತಿಹಾಸಜ್ಞ ರಾಮಚಂದ್ರ ಗುಹಾ ಹೇಳಿದ್ದಾರೆ.
ತಮ್ಮ ಹೊಸ ಪುಸ್ತಕ 'ಗಾಂಧಿ: ದಿ ಇಯರ್ಸ್ ದಟ್ ಚೇಂಜ್ಡ್ ದಿ ವರ್ಲ್ಡ್, 9914-1948' ಪುಸ್ತಕದ ಬಗ್ಗೆ ಮಾತನಾಡುತ್ತಾ ಅವರು ಈ ಮಾತುಗಳನ್ನು ಹೇಳಿದ್ದಾರೆ.
ಮೊಹಮ್ಮದ್ ಅಲಿ ಜಿನ್ನಾ ಭಾರತ ಪಾಕಿಸ್ತಾನ ವಿಭಜನೆಯ ಕಾರಣಕರ್ತ ಎಂದೇ ಹೇಳಲಾಗುತ್ತದೆ. ಧರ್ಮ ಬಿರು ಎಂದೂ ಗುರುತಿಸಲಾಗುತ್ತದೆ. ಇದೀಗ ರಾಮಚಂದ್ರ ಗುಹಾ ಅವರು ಅಮಿತ್ ಶಾ ಅವರನ್ನು ಮೊಹಮ್ಮದ್ ಅಲಿ ಜಿನ್ನಾ ಅವರಿಗೆ ಹೋಲಿಸಿರುವುದು ವಿವಾದದ ಸ್ವರೂಪ ಪಡೆಯುವ ಸಾಧ್ಯತೆ ಇದೆ.

ಮೊಹಮ್ಮದ್ ಅಲಿ ಜಿನ್ನಾ 'ಏನಾದರೂ ಆಗಲಿ ಮುಸ್ಲಿಮರಿಗೆ ಪ್ರತ್ಯೇಕ ರಾಷ್ಟ್ರ ಬೇಕು' ಎಂದು ಹೇಳಿದ್ದರು. ಅಮಿತ್ ಶಾ ಸಹ ಅದೇ ರೀತಿಯ ಮಾತುಗಳನ್ನಾಡುತ್ತಿದ್ದು, 'ಏನಾದರೂ ಆಗಲಿ ಚುನಾವಣೆ ಗೆಲ್ಲಬೇಕು' ಎನ್ನುತ್ತಿದ್ದಾರೆ. ಇಬ್ಬರೂ ತಮ್ಮ ಗುರಿ ಸಾಧನೆಗೆ ಯಾವ ಬೆಲೆಯನ್ನಾದರೂ ತೆರಬಲ್ಲವರು ಎಂದು ಅವರು ಹೇಳಿದ್ದಾರೆ.
ಮೊಹಮ್ಮದ್ ಅಲಿ ಜಿನ್ನಾಗೆ ಇದ್ದದ್ದು ಒಂದೇ ಗುರಿ 'ಧರ್ಮದ ಆಧಾರದಲ್ಲಿ ಹೊಸ ರಾಷ್ಟ್ರ ಕಟ್ಟಬೇಕು ಆ ರಾಷ್ಟ್ರಕ್ಕೆ ನಾನು ನಾಯಕನಾಗಬೇಕು' ಎಂಬುದು. ಅಮಿತ್ ಶಾ ಗೆ ಸಹ ಅದೇ ರೀತಿಯ ಒನ್ ಪಾಯಿಂಟ್ ಅಜೆಂಡಾ ಇದೆ ಎಂದು ಗುಹಾ ಹೇಳಿದ್ದಾರೆ.

ನಾನು ಜಿನ್ನಾ ಬಗ್ಗೆ ಯಾವುದೇ ಮೃದು ಧೋರಣೆ ಇಲ್ಲದೆ ಬರೆದಿದ್ದೇನೆ. ಗಾಂಧಿ, ಅಂಬೇಡ್ಕರ್ ಅವರ ಬಗ್ಗೆ ಬರೆವಾಗ ಅವರು ಜೀವನದಲ್ಲಿ ಅನುಭವಿಸಿದ ಕಷ್ಟಗಳಾದರೂ ನನ್ನನ್ನು ಮೃದು ಮಾಡಿಬಿಡುತ್ತವೇನೋ ಆದರೆ ಜಿನ್ನಾ ವಿಷಯದಲ್ಲಿ ಹಾಗಾಗಿಲ್ಲ ಎಂದು ಅವರು ಹೇಳಿದ್ದಾರೆ.
ರಾಂಚಂದ್ರ ಗುಹಾ ಅವರ ಹೊಸ ಪುಸ್ತಕವು 1100 ಪುಟಗಳಿಗಿಂತಲೂ ಹೆಚ್ಚಿಗಿದ್ದು. ಮಹಾತ್ಮಾ ಗಾಂಧಿ ಅವರು ದಕ್ಷಿಣ ಆಫ್ರಿಕಾದಿಂದ ಬಂದ ದಿನಗಳಿಂದ ಹಿಡಿದು ಅವರ ಮರಣದವರೆಗೆ ಮಾಹಿತಿಯನ್ನು ಒಳಗೊಂಡಿದೆ. ಗಾಂಧಿ ಅವರ ಪ್ರೇಮ ಪ್ರಕರಣ, ವಿಚಿತ್ರ ಪ್ರಯೋಗದ ಬಗ್ಗೆಯೂ ರಾಮಚಂದ್ರ ಗುಹಾ ತಮ್ಮ ಹೊಸ ಪುಸ್ತಕದಲ್ಲಿ ಬರೆದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications