ಬಿಜೆಪಿ ಕಾರ್ಯಕಾರಿ ಸಮಿತಿಯಿಂದ ಬಿಎಸ್ವೈ ಔಟ್
ಬೆಂಗಳೂರು, ಮಾ.12: ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಹೊರ ಹಾಕಲಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು 111 ಜನರಿರುವ ಹೊಸ ಸಮಿತಿಯನ್ನು ಗುರುವಾರ ಪ್ರಕಟಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರಲ್ಲದೆ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಅಲ್ಪಸಂಖ್ಯಾತ ವ್ಯವಹಾರ ಖಾತೆ ಸಚಿವೆ ನಜ್ಮಾ ಹೆಫ್ತುಲ್ಲಾ, ಮಥುರಾ ಸಂಸದೆ ಹೇಮಮಾಲಿನಿ, ಹಿರಿಯ ವಕ್ತಾರ ಸೈಯದ್ ಶಹನವಾಜ್ ಹುಸೇನ್, ರಾಜನಾಥ್ ಸಿಂಗ್ ಅವರ ಆಪ್ತ ಸುಧಾಂಶು ತ್ರಿವೇದಿ ಮುಂತಾದ ಪ್ರಮುಖರನ್ನು ಸಮಿತಿಗೆ ಸೇರಿಸಿಲ್ಲ.
ಏ.3 ಹಾಗೂ 4 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲಾ ಸದಸ್ಯರು, ಆಹ್ವಾನಿತ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಅಮಿತ್ ಶಾ ಅವರು ಹೆಸರಿಸಿರುವ 111 ಸದಸ್ಯರ ಪೈಕಿ ಬಿಜೆಪಿ ಆಡಳಿತವಿರುವ 8 ಮುಖ್ಯಮಂತ್ರಿಗಳು, ಇಬ್ಬರು ಉಪ ಮುಖ್ಯಮಂತ್ರಿಗಳು, 24 ಮಾಜಿ ಮುಖ್ಯಮಂತ್ರಿಗಳು, 3 ಮಾಜಿ ಉಪ ಮುಖ್ಯಮಂತ್ರಿಗಳು ಇದ್ದಾರೆ. 40 ಜನ ಹಿರಿಯ ನಾಯಕರು ವಿಶೇಷ ಆಹ್ವಾನಿತರಾಗಿದ್ದಾರೆ. [ಏ.2ರಿಂದ ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ]
ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಆರಂಭವಾಗುವ ಪಟ್ಟಿ 111ನೇ ಸದಸ್ಯರಾಗಿ ಡಾ. ಸಿ.ಪಿ ರಾಧಾಕೃಷ್ಣ ಅವರ ಹೆಸರಿನೊಂದಿಗೆ ಕೊನೆಗೊಳ್ಳಲಿದೆ.
ಕರ್ನಾಟಕದಿಂದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ, ಆರ್ ಅಶೋಕ್ ಇದ್ದಾರೆ. ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸಿಟಿ ರವಿ, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ ಕಾಣಿಸಿಕೊಂಡಿದ್ದಾರೆ. ಪೂರ್ಣ ಪಟ್ಟಿ ನೋಡಲು ಇಲ್ಲಿ ಕ್ಲಿಕ್ಕಿಸಿ. (ಪಿಟಿಐ)
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications