ಭೀಮಾ-ಕೊರೆಗಾಂವ್: ಟ್ವಿಟ್ಟರ್ ನಲ್ಲಿ ಶಾ-ರಾಹುಲ್ ಮಾರಾಮಾರಿ!
ನವದೆಹಲಿ, ಸೆಪ್ಟೆಂಬರ್ 28: ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದದ್ದ ಪ್ರಗತಿಪರರ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ ಸುಪ್ರೀಂ ತೀರ್ಪನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ವಾಗತಿಸಿದ್ದಾರೆ.
ಮೋದಿಯದ್ದು 'ಸ್ಕಿಲ್ ಇಂಡಿಯಾ' ಅಲ್ಲ 'ಕಿಲ್ ಇಂಡಿಯಾ': ರಾಹುಲ್ ಕುಟುಕು
ಈ ಕುರಿತು ಟ್ವೀಟ್ ಮಾಡಿರುವ ಅವರು, ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಛೀಮಾರಿ ಹಾಕಿದ್ದಾರೆ.
ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಗತಿಪರರನ್ನು ಬಂಧಿಸಿದ್ದನ್ನು ವಿರೋಧಿಸಿ, ರಾಹುಲ್ ಗಾಂಧಿಯವರು ಆಗಸ್ಟ್ 28 ರಂದು ಟ್ವೀಟ್ ಮಾಡಿದ್ದರು. ಆ ಟ್ವೀಟ್ ಅನ್ನು ಗುರಿಯಾಗಿಸಿಕೊಂಡು ಪ್ರತಿಕ್ರಿಯೆ ನೀಡಿರುವ ಶಾ, ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
'ದಡ್ಡತನಕ್ಕೆ ಒಂದೇ ಒಂದು ಜಾಗವೆಂದರೆ ಅದು ಕಾಂಗ್ರೆಸ್! ಮಾವೋವಾದಿಗಳು, ನಕಲಿ ಸಾಮಾಜಿಕ ಕಾರ್ಯಕರ್ತರು, ಭ್ರಷ್ಟ ಅಂಶಗಳನ್ನು ಬೆಂಬಲಿಸುವುದು ಮತ್ತು ಪ್ರಾಮಾಣಿಕರನ್ನು ಮತ್ತು ಕೆಲಸಗಾರರನ್ನು ಅವಮಾನಿಸುವುದೇ ಅವರ ಕೆಲಸ. ರಾಹುಲ್ ಗಾಂಧಿ ಅವರ ಕಾಂಗ್ರೆಸ್ಸಿಗೆ ಸ್ವಾಗತ!' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಯುವಜನರಿಂದ ಹಣ ಕದ್ದು, ಅಂಬಾನಿ ಕಿಸೆಗೆ ತುಂಬಿಸುವ ಚೌಕಿದಾರ: ರಾಹುಲ್ ಆರೋಪ
There is only one place for idiocy and it's called the Congress. Support ‘Bharat Ke Tukde Tukde Gang’, Maoists, fake activists and corrupt elements. Defame all those who are honest and working.
— Amit Shah (@AmitShah) September 28, 2018
Welcome to Rahul Gandhi’s Congress. #BhimaKoregaon https://t.co/eWoeT0qo1L
ಆಗಸ್ಟ್ 28 ರಂದು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ''ಭಾರತದಲ್ಲಿ ಆರೆಸ್ಸೆಸ್ ಎಂಬ ಎನ್ ಜಿಒಕ್ಕೆ ಮಾಗತ್ರ ಜಾಗವಿರುವುದು. ಉಳಿದೆಲ್ಲ ಎನ್ ಜಿಒಗಳನ್ನೂ ಮುಚ್ಚಿ! ಎಲ್ಲಾ ಸಾಮಾಜಿಕ ಕಾರ್ಯಕರ್ತರನ್ನೂ ಜೈಲಿಗಟ್ಟಿ. ದೂರು ನೀಡುವವರನ್ನು ಶೂಟ್ ಮಾಡಿ! ಹೊಸ ಭಾರತಕ್ಕೆ ಸ್ವಾಗತ" ಎಂದಿದ್ದರು.
There is only place for one NGO in India and it's called the RSS. Shut down all other NGOs. Jail all activists and shoot those that complain.
— Rahul Gandhi (@RahulGandhi) August 28, 2018
Welcome to the new India. #BhimaKoregaon
ಇದಕ್ಕೆ ಪ್ರತಿಕ್ರಿಯೆಯಾಗಿ ಅದೇ ಧಾಟಿಯಲ್ಲಿ ಟ್ವೀಟ್ ಮಾಡಿರುವ ಶಾ, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ.