ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಹಿಂಸಾಚಾರ: ಅಮಿತ್ ಶಾ, ಅರವಿಂದ್ ಕೇಜ್ರಿವಾಲ್ ತುರ್ತು ಸಭೆ

|
Google Oneindia Kannada News

ನವದೆಹಲಿ, ಫೆಬ್ರವರಿ 25: ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೇರುತ್ತಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತುರ್ತು ಸಭೆ ನಡೆಸುತ್ತಿದ್ದಾರೆ.

Recommended Video

Amit Shah and Arvind Kejriwal meet up for an emergency meeting | Amit Shah | Kejriwal | Delhi

ಈಗಾಗಲೇ ಹತ್ತು ಪ್ರದೇಶಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬಾಯ್‌ಜಾಲ್, ಪೊಲೀಸ್ ಆಯುಕ್ತರಾದ ಅಮೂಲ್ಯ ಪಟ್ನಾಯಕ್,ಕಾಂಗ್ರೆಸ್ ಮುಖಂಡ ಸುಭಾಷ್ ಛೋಪ್ರಾ, ಬಿಜೆಪಿ ಮುಖಂಡ ಮನೋಜ್ ತಿವಾರಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಮಧ್ಯರಾತ್ರಿ ಹೊತ್ತಿ ಉರಿದ ದೇಶದ ರಾಜಧಾನಿ; ಕಿಚ್ಚು ಹಬ್ಬಿದ ವೃತ್ತಾಂತಮಧ್ಯರಾತ್ರಿ ಹೊತ್ತಿ ಉರಿದ ದೇಶದ ರಾಜಧಾನಿ; ಕಿಚ್ಚು ಹಬ್ಬಿದ ವೃತ್ತಾಂತ

ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಕಡಿಮೆ ಇದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.ಕಳೆದ ಮೂರು ತಿಂಗಳಿಂದ ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಅದು ಹಿಂಸಾಚಾರದ ಹಂತವನ್ನು ತಲುಪಿದೆ. ಸೋಮವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಹೇಳಿದೆ.

Amit Shah Is Chairing A Meeting With Delhi CM Arvind Kejriwal

ಜಫ್ರಾಬಾದ್, ಮೌಜ್ ಪುರ್, ಚಾಂದ್ ಬಾಗ್, ಖುರೇಜಿ ಖಾಸ್ ಮತ್ತು ಭಜನ್ ಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಉದ್ರಿಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದು, ಅಶ್ರುವಾಯು ಸಿಡಿಸಿದ್ದಾರೆ.

ಅಗತ್ಯಬಿದ್ದರೆ ಸೇನೆಯನ್ನು ಕೂಡ ನಿಯೋಜಿಸಲಾಗುತ್ತದೆ. ಶೀಘ್ರವೇ ಆ ಸ್ಥಳದಲ್ಲಿ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ. ಪೊಲೀಸರ ಅಭಾವದಿಂದಲೇ ಇಂತಹ ಘಟನೆ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

English summary
Tami Nadu: State Minister D Jayakumar gifts gold rings to newly born infants at RSRM Government Hospital in Royapuram, as a part of celebrations on former CM J. Jayalalithaa's birth anniversary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X