ರಾಹುಲ್ ಗಾಂಧಿಯಿಂದ ಏನನ್ನು ನಿರೀಕ್ಷಿಸಲು ಸಾಧ್ಯ : ಅಮಿತ್ ವ್ಯಂಗ್ಯ
ನವದೆಹಲಿ, ಮೇ 26: "ಬಿಜೆಪಿಯು ದಣಿವರಿಯದೆ ಕೆಲಸ ಮಾಡುವ ಮತ್ತು ಜಗತ್ತಿನ ಅತ್ಯಂತ ಜನಪ್ರಿಯ ಪ್ರಧಾನಿಯನ್ನು ದೇಶಕ್ಕೆ ನೀಡಿದೆ" ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
"ದಿನಕ್ಕೆ 15-18 ಗಂಟೆ ಕೆಲಸ ಮಾಡುವ ಪ್ರಧಾನಿ ಅವರು. ಈ ಪ್ರಧಾನಿ ಬಿಜೆಪಿಯ ನಾಯಕ ಎನ್ನಲು ನಮಗೆ ಹೆಮ್ಮೆಯಾಗುತ್ತದೆ" ಎಂದು ಮೋದಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಪತ್ರಕರ್ತರು ಕೇಳಿದ ಹಲವು ಪ್ರಶ್ನೆಗಳಿಗೆ ಈ ಸಂದರ್ಭದಲ್ಲಿ ಅಮಿತ್ ಶಾ ಉತ್ತರ ನೀಡಿದರು.
ಅಮಿತ್ ಶಾ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಇಲ್ಲಿದೆ.
|
ರಾಹುಲ್ ಗಾಂಧಿ ಬಗ್ಗೆ
ಮೋದಿ ಸರ್ಕಾರದ ಸಾಧನೆಯ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ ಅವರ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, 'ಅವರು ವಿರೋಧ ಪಕ್ಷದವರು. ಅವರಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ? ಅವರು ಇಂಥ ಆರೋಪ ಮಾಡಲೇಬೇಕು. ಯಾರು ಬೇಕಾದರೂ ನಮಗೆ ಸವಾಲೆಸೆಯಬಹುದು. ನಾವು ಪಾರದರ್ಶಕವಾಗಿ ಎಲ್ಲ ಮಾಹಿತಿಯನ್ನೂ ನೀಡಲು ಸಿದ್ದರಿದ್ದೇವೆ' ಎಂದರು.
|
ಬಿಜೆಪಿ ಪಾಲಿಗೆ ಯುದ್ಧ ಕೊನೆಯ ಆಯ್ಕೆ
ಭಾರತೀಯ ಜನತಾ ಪಕ್ಷದ ಪಾಲಿಗೆ ಯುದ್ಧ ಎಂಬುದು ಎಂದಿಗೂ ಕೊನೆಯ ಆಯ್ಕೆ. ಗಡಿ ಭದ್ರತೆಯ ಕುರಿತು ನಾವು ಝೀರೋ ಟಾಲರೆನ್ಸ್ ಹೊಂದಿದ್ದೇವೆ. ಅತ್ಯಂತ ಹೆಚ್ಚಿನ ಸಂಖ್ಯೆ ಭಯೋತ್ಪಾದಕರನ್ನು ಕೊಲ್ಲಲ್ಪಟ್ಟಿದ್ದು ಬಿಜೆಪಿ ಆಡಳಿತದಲ್ಲಿ ಎಂಬುದು ಗೊತ್ತಿರಲಿ! - ಅಮಿತ್ ಶಾ
|
ಇಂಧನ ಬೆಲೆ ಏರಿಕೆ ಬಗ್ಗೆ
'ಇಂಧನ ಬೆಲೆ ಏರಿಕೆಯ ಬಗ್ಗೆ ಈಗ ಸಾಕಷ್ಟು ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ಮೂರು ವರ್ಷಗಳ ಕಾಲ ಇದೇ ದರ ಇತ್ತು. ಆಗ ಯಾರೂ ಪ್ರಶ್ನೆ ಮಾಡಲಿಲ್ಲ. ಆದರೆ ಈಗ ಮೂರೇ ದಿನಕ್ಕೆ ಪ್ರಶ್ನೆ ಮಾಡುತ್ತಿದ್ದೀರಿ! ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದೆ. ನಾವು ಇದಕ್ಕೆ ದೀರ್ಘಕಾಲೀನ ಪರಿಹಾರ ಹುಡುಕುತ್ತೇವೆ'- ಅಮಿತ್ ಶಾ
|
ಚಂದ್ರಬಾಬು ನಾಯ್ಡು ಬಿಟ್ಟರೇನು? ನಿತೀಶ್ ಬಂದರು!
ಎನ್ ಡಿಎ ಸರ್ಕಾರದಿಂದ ಟಿಡಿಪಿ ಹೊರಹೋಗಿದ್ದು ಸತ್ಯ. ಆದರೆ ನಿತೀಶ್ ಕುಮಾರ್ ನಮ್ಮ ಜೊತೆ ವಾಪಸ್ ಬಂದರು! 2014 ರ ನಂತರ 11 ಕ್ಕೂ ಹೆಚ್ಚು ಪಕ್ಷಗಳು ಎನ್ ಡಿಎ ಜೊತೆ ಬಂದವು. ಎನ್ ಡಿಎ ಕುಟುಂಬ ವೃದ್ಧಿಯಾಗಿದೆ, ಬಲ ಕಡಿಮೆಯಾಗಿಲ್ಲ. ಚಂದ್ರಬಾಬು ನಾಯ್ಡಯ ಅವರೊಬ್ಬರೇ ಹೊರಹೋಗಿದ್ದು- ಅಮಿತ್ ಶಾ
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications