ಅಮಿತ್ ಶಾ ಆಪ್ತ ವಕೀಲ ಸಿಜೆಯಾಗಿ ನೇಮಕ?
ನವದೆಹಲಿ, ಜು.11: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಅವರ ಎರಡು ಕ್ರಿಮಿನಲ್ ಗಳ ವಕೀಲರಾಗಿದ್ದ ಉದಯ್ ಯು ಲಲಿತ್ ಅವರು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳುವ ಸಾಧ್ಯತೆ ಕಂಡುಬಂದಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದತ್ತು ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿ ಉದಯ್ ಯು.ಲಲಿತ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ತೀರ್ಮಾನಿಸಿದೆ. ಈ ಹಿಂದೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಮಾಜಿ ಅಡ್ವಕೇಟ್ ಜನರಲ್ ಗೋಪಾಲ್ ಸುಬ್ರಮಣಿಯಮ್ ಹೆಸರು ಕೇಳಿಬಂದಿತ್ತು. ಆದರೆ, ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕ ಮಾಡಿದ್ದ ಕೊಲೀಜಿಯಮ್ ಸಮಿತಿ ಇವರ ಹೆಸರನ್ನು ಕೈ ಬಿಟ್ಟಿತ್ತು.
ಅಂತಿಮವಾಗಿ ಗೋಪಾಲನ್ ಸುಬ್ರಮಣಿಯಮ್ ತಾವು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲು ನಿರಾಕರಿಸಿರುವುದಾಗಿ ಘೋಷಣೆ ಮಾಡಿದ್ದರು. ಈ ಬಗ್ಗೆ ವಿಪಕ್ಷಗಳಿಂದ ಭಾರಿ ವಿರೋಧ ಕೇಳಿ ಬಂದಿತ್ತು.

ಇದೀಗ ಕೇಂದ್ರ ಸರ್ಕಾರವು ಉದಯ್ ಯು.ಲಲಿತ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಬಹುತೇಕ ಸಮ್ಮತಿಸಿದೆ. ಮೂರು ದಿನಗಳ ಹಿಂದೆಯಷ್ಟೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಅಮಿತ್ ಷಾ ಅವರ ಹಲವಾರು ಪ್ರಕರಣಗಳನ್ನು ಇವರು ನಿರ್ವಹಣೆ ಮಾಡಿದ್ದರು.
ಸೊಹ್ರಾಬುದ್ದೀನ್ ಶೇಕ್, ತುಳಸಿರಾಮ್ ಪ್ರಜಾಪತಿ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಅಮಿತ್ ಷಾ ಪ್ರಮುಖ ಆರೋಪಿಯಾಗಿದ್ದು, ಈ ಎರಡೂ ಪ್ರಕರಣಗಳಲ್ಲಿ ಕೊಲೆ ಮತ್ತು ಪಿತೂರಿ ನಡೆಸಿದ ಆರೋಪವನ್ನು ಅಲ್ಲಗೆಳೆದು ಲಲಿತ್ ಅವರು ವಾದಿಸಿದ್ದಾರೆ. ಅನೇಕ ಪ್ರಕರಣಗಳ ಬಗ್ಗೆ ಉದಯ್ ಯು.ಲಲಿತ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
2005ರಲ್ಲಿ ಅಮಿತ್ ಶಾ ಅವರು ಗುಜರಾತಿನ ಗೃಹ ಸಚಿವರಾಗಿದ್ದ ಕಾಲದಲ್ಲಿ ನಕಲಿ ಎನ್ ಕೌಂಟರ್ ನಲ್ಲಿ ಪೊಲೀಸರು ಉಗ್ರಗ್ರಾಮಿ ಎಂದು ಹೇಳಿ ಸೊಹ್ರಾಬುದ್ದೀನ್ ಅವರನ್ನು ಹತ್ಯೆ ಮಾಡಿದ್ದರು. ಈ ಪ್ರಕರಣದ ಸಾಕ್ಷಿಯಾಗಿದ್ದ ತುಳಸಿ ಪ್ರಜಾಪತಿ ಅವರು ಮರುವರ್ಷ ಹತ್ಯೆ ಮಾಡಲಾಗಿತ್ತು.
2ಜಿ ತರಂಗಗುಚ್ಛ ಹಂಚಿಕೆ ಹಗರಣದ ವಿಶೇಷ ಪ್ರಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಲಲಿತ್ ಅವರು ಸುಪ್ರೀಂಕೋರ್ಟಿನ ಉನ್ನತ ಸ್ಥಾನಕ್ಕೆ ನೇರವಾಗಿ ಆಯ್ಕೆಯಾಗುತ್ತಿರುವ ಆರನೇ ವಕೀಲರೆನಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications