ಚಾಂದನಿ ಚೌಕ್ನಲ್ಲಿ ಕೋಮು ಸಂಘರ್ಷ: ಮಧ್ಯಪ್ರವೇಶಿಸಿದ ಅಮಿತ್ ಶಾ
ನವದೆಹಲಿ, ಜುಲೈ 3: ದೆಹಲಿಯ ಚಾಂದನಿ ಚೌಕ್ ಪ್ರದೇಶದಲ್ಲಿ ಬೈಕ್ ಪಾರ್ಕಿಂಗ್ನ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ದೇವಸ್ಥಾನಕ್ಕೆ ಹಾನಿಯುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶ ಮಾಡಿದ್ದಾರೆ.
ಚಾಂದನಿ ಚೌಕ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರನ್ನು ಕಚೇರಿಗೆ ಕರೆಸಿಕೊಂಡಿದ್ದರು. ಈ ವೇಳೆ ಆಯುಕ್ತರು ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌಜ್ ಖಾಜಿ ಪ್ರದೇಶದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದಿದೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಾರ್ಕಿಂಗ್ ವಿಚಾರದಲ್ಲಿ ನಡೆದ ಗಲಾಟೆ ಚಾಂದನಿ ಚೌಕ್ನಲ್ಲಿ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ಲಾಲ್ ಕುವಾನ್ನಲ್ಲಿರುವ ಪುರಾತನ ದುರ್ಗಾ ಮಾತಾ ಮಂದಿರಕ್ಕೆ ಜೂನ್ 30ರ ರಾತ್ರಿ ಸುಮಾರು 200 ಜನರ ಗುಂಪು ನುಗ್ಗಿ ದಾಂದಲೆ ನಡೆಸಿತ್ತು. ಅಲ್ಲಿದ್ದ ದೇವರ ವಿಗ್ರಹ ಮುಂತಾದವುಗಳನ್ನು ಹಾನಿಗೊಳಿಸಿತ್ತು ಎಂದು ಆರೋಪಿಸಲಾಗಿದೆ.

ಈ ಘಟನೆ ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಪ್ರತಿಭಟನೆಗಳು, ಕಲ್ಲು ತೂರಾಟ ನಡೆದಿದ್ದವು. ಎರಡು ಕೋಮುಗಳ ನಡುವೆ ಸಂಘರ್ಷ ತೀವ್ರಗೊಳ್ಳುವ ಸಾಧ್ಯತೆ ಉಂಟಾಗಿತ್ತು. ಹೀಗಾಗಿ ಪರಿಸ್ಥಿತಿ ಕೈಮೀರಿ ಹೋಗದಂತೆ ತಡೆಯಲು ಸೂಚನೆ ನೀಡುವ ಸಲುವಾಗಿ ದೆಹಲಿ ಪೊಲೀಸ್ ಅಯುಕ್ತರಿಗೆ ಅಮಿತ್ ಶಾ ಕರೆ ಮಾಡಿದ್ದರು.
ಈಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರಕರಣ ಕುರಿತು ತನಿಖೆ ಮುಂದುವರಿಸಲಾಗಿದೆ. ಬಂಧಿತ ನಾಲ್ವರಲ್ಲಿ ಅಪ್ತಾಪ್ತ ವಯಸ್ಕನೊಬ್ಬನೂ ಸೇರಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications