ಸಂಪರ್ಕ ಸಮರ್ಥನ ಅಭಿಯಾನಕ್ಕೆ ಚಾಲನೆ ನೀಡಲಿರುವ ಅಮಿತ್ ಶಾ
Recommended Video
ನವದೆಹಲಿ, ಮೇ 29: ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಎನ್ ಡಿಎ ಮೈತ್ರಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮನದಟ್ಟುಮಾಡುವ ಸಲುವಾಗಿ ಸಮರ್ಥನೆಗಾಗಿ ಸಂಪರ್ಕ್ ಎಂಬ ಅಭಿಯಾನವನ್ನು ಆರಂಭಿಸಲು ಬಿಜೆಪಿ ನಿರ್ಧರಿಸಿದೆ.
ಈ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದು, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ದಲ್ಬಿರ್ ಸಿಂಗ್ ಅವರ ಮನೆಯಿಂದ ಈ ಅಭಿಯಾನ ಆರಂಭವಾಗಲಿದೆ. ಅಮಿತ್ ಶಾ ಅವರು ಖುದ್ದು 50 ಕ್ಕೂ ಹೆಚ್ಚು ಜನರನ್ನು ಭೇಟಿಯಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತಿಳಿಸಿ, ಅರಿವು ಮೂಡಿಸಲಿದ್ದಾರೆ.
ಮೋದಿ ಸರ್ಕಾರಕ್ಕೆ 4ರ ಸಂಭ್ರಮ, ಟಾಪ್ 15ಯೋಜನೆಗಳು
ಅಂತೆಯೇ ಈ ಅಭಿಯಾನದ ಪ್ರಕಾರ ಬಿಜೆಪಿಯ ಪ್ರತಿ ಕಾರ್ಯಕರ್ತನೂ ಕನಿಷ್ಠ ಹತ್ತು ಜನರಿಗೆ ಸರ್ಕಾರದ ಸಾಧನೆಯ ಕುರಿತು ಅರಿವು ಮೂಡಿಸುವಂತೆ ಟಾಸ್ಕ್ ನೀಡಲಾಗಿದೆ. ನಮೋ app ನಲ್ಲಿ ಸಹ ಸಮರ್ಥನೆಗಾಗಿ ಸಂಪರ್ಕ್ ದ ಕುರಿತು ಕೆಲವು ಮಾಹಿತಿಗಳನ್ನು ನೀಡಲಾಗಿದೆ.
ಮೇ 27 ರಂದು ಬಿಜೆಪಿ ನೇತ್ರತ್ವದ ಎನ್ ಡಿಎ ಮೈತ್ರಿ ಸರ್ಕಾರ, ನಾಲ್ಕು ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳ ಕುರಿತು ಜನರಿಗೆ ತಿಳಿಸುವ ಕಾರ್ಯ ನಡೆಯುತ್ತಿದೆ. 2019 ರಲ್ಲಿ ಲೋಕಸಭಾ ಚುನಾವಣೆಯೂ ಇರುವುದರಿಂದ ಈ ಕಾರ್ಯವನ್ನು ಬಿಜೆಪಿನಾಯಕರು ಮುತುವರ್ಜಿಯಿಂದ ಮಾಡುತ್ತಿದ್ದಾರೆ.