ಸಮಸ್ತ ಭಾರತೀಯರಿಗೆ ಕಿರಣ್ ಬೇಡಿ ಬಹಿರಂಗ ಪತ್ರ
ನವದೆಹಲಿ, ಫೆ. 16: ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡು ಮುಖಭಂಗ ಅನುಭವಿಸಿರುವ ಒಂದು ಕಾಲದ ಸೂಪರ್ ಕಾಪ್ ಕಿರಣ್ ಬೇಡಿ ಈಗ ಭಾರತೀಯರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ತಮ್ಮ ಅಧಿಕೃತ ಬ್ಲಾಗ್ ಪುಟವಾದ 'Crane Bedi'ಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ತಾವು ಪರೀಕ್ಷೆಯಲ್ಲಿ ಅನುತ್ತೀರ್ಣನಾದೆ ಎಂದು ಹೇಳಿಕೊಂಡಿದ್ದಾರೆ. [ಬೇಡಿ ಸಿಡಿಸಿದ ಹೊಸ ಬಾಂಬ್]

"ನಾನು ಚುನಾವಣೆಗೆ ಸ್ಪರ್ಧಿಸಿದ್ದು ಯಾವುದೇ ಸ್ಥಾನದ ಆಕಾಂಕ್ಷೆಯಿಂದಲ್ಲ. ಸುಮಾರು 40 ವರ್ಷಗಳಿಂದ ಆಶ್ರಯ ಪಡೆದಿರುವ ನಗರಕ್ಕೆ ಸೇವೆ ಸಲ್ಲಿಸುವ ಉದ್ದೇಶ ಹೊಂದಿದ್ದೆ. ಕೇಂದ್ರ ಸರ್ಕಾರದ ಸಹಾಯದೊಂದಿಗೆ ಸ್ಥಿರ ಸರ್ಕಾರ ನೀಡುವುದು ಹಾಗೂ ದೆಹಲಿಯ ಅಗತ್ಯಗಳನ್ನು ಪೂರೈಸುವುದು ನನ್ನ ಉದ್ದೇಶವಾಗಿತ್ತು" ಎಂದು ಹೇಳಿಕೊಂಡಿದ್ದಾರೆ. [ಬಿಜೆಪಿ ಮಾಡಿದ ದೊಡ್ಡ ತಪ್ಪು]
ಈಗ ಸಿಕ್ಕಿರುವ ಪರಿಣಾಮದಿಂದ ನಾನು ಮಾನಸಿಕವಾಗಿ ಕುಸಿದಿಲ್ಲ. ನನಗೆ ಸಿಕ್ಕ ಸಮಯಾವಕಾಶದಲ್ಲಿ ನನ್ನೆಲ್ಲ ಸಾಮರ್ಥ್ಯ ಹಾಗೂ ಅನುಭವವನ್ನು ಧಾರೆ ಎರೆದಿದ್ದೇನೆ. ಆದರೆ, ಈ ಶ್ರಮ ಸಾಕಾಗಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. [8 ವಿವಾದಗಳು]
ಪೊಲೀಸ್ ಅಧಿಕಾರಿಯಾಗಿದ್ದಾಗ ಹಲವು ಸವಾಲುಗಳನ್ನು ಎದುರಿಸಿದ್ದೇನೆ. ಹಲವು ಕಾರ್ಯಕ್ರಮಗಳಿಗೆ ರಕ್ಷಣೆ ನೀಡಿದ್ದೇನೆ. ಭಯೋತ್ಪಾದಕರನ್ನು ಹಿಡಿಯಲು ಶ್ರಮಪಟ್ಟಿದ್ದೇನೆ.
ಅತ್ಯಾಚಾರಗಳನ್ನು ತಡೆಯಲು ಹಲವು ಗ್ರಾಮಗಳಲ್ಲಿ ವಿವಿಧ ಕ್ರಮ ಕೈಗೊಂಡಿದ್ದೇನೆ. ಸಂಚಾರ ವ್ಯವಸ್ಥೆ ಸುಧಾರಿಸಲೂ ದುಡಿದಿದ್ದೇನೆ. ನಾನು ಕೈಗೊಂಡ ಹಲವು ಕ್ರಮಗಳು ಉತ್ತಮ ಪರಿಣಾಮ ಬೀರಿವೆ. [ಅಭಿವೃದ್ಧಿಗೆ ಬೇಡಿ ಸೂತ್ರ]
ಯಾವುದೇ ಆಸೆ ಈಡೇರಿಸಿಕೊಳ್ಳಲು ನಾನು ಹೀಗೆ ಮಾಡಿಲ್ಲ. ಸೇವೆಯ ಉದ್ದೇಶದಿಂದ ಸಮಯಕ್ಕೆ ತಕ್ಕಂತೆ ಕ್ರಮ ಕೈಗೊಂಡಿದ್ದೇನೆ. ಚುನಾವಣೆ ಕುರಿತು ಟೀಕೆ ಮಾಡಿರುವ ನನಗೆ ಅದನ್ನು ಎದುರಿಸುವುದು ಉದ್ದೇಶವಾಗಿತ್ತು ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications