ಕಾಂಗ್ರೆಸ್ ಮೇಲೆ ಹೂಡಿದ್ದ ಕೇಸು ವಾಪಸ್ ಪಡೆಯಲಿದ್ದಾರೆ ಅನಿಲ್ ಅಂಬಾನಿ
ನವದೆಹಲಿ, ಮೇ 21: ಕಾಂಗ್ರೆಸ್ ಪಕ್ಷ ಹಾಗೂ ಅದರದ್ದೇ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಮೇಲೆ ಹೇರಿದ್ದ ಮಾನನಷ್ಟ ಮೊಕದ್ದಮೆಯನ್ನು ಉದ್ಯಮಿ ಅನಿಲ್ ಅಂಬಾನಿ ವಾಪಸ್ ಪಡೆಯಲಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್ ಕಾಂಗ್ರೆಸ್ ಮತ್ತು ನ್ಯಾಷನಲ್ ಹೆರಾಲ್ಡ್ ಮೇಲೆ 5000 ಕೋಟಿ ರೂಪಾಯಿಯ ಬಹುದೊಡ್ಡ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿತ್ತು, ಆದರೆ ಅದನ್ನು ವಾಪಸ್ ಪಡೆಯಲು ನಿರ್ಣಯಿಸಿದೆ ಸಂಸ್ಥೆ.
ನಮ್ಮ ವಿರೋಧಿಗಳು ನಮ್ಮ ಮೇಲೆ ಹೂಡಿರುವ ಪ್ರಕರಣವನ್ನು ಹಿಂಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದು ಕಾಂಗ್ರೆಸ್ ಪರ ವಕೀಲರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ನಾವು ಹೂಡಿದ್ದ ಪ್ರಕರಣವನ್ನು ಹಿಂಪಡೆಯುತ್ತಿದ್ದೇವೆ ಎಂದು ಎದುರಾಳಿಗಳಿಗೆ ತಿಳಿಸಿದ್ದೇವೆ ಎಂದು ಅನಿಲ್ ಅಂಬಾನಿ ಅವರು ರಿಲಯನ್ಸ್ ಸಂಸ್ಥೆ ಪರ ವಕೀಲರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ರಜಾ ಅವಧಿ ಮುಗಿದ ನಂತರ ಅಧಿಕೃತವಾಗಿ ಮಾನನಷ್ಟ ಪ್ರಕರಣವನ್ನು ರಿಲಯನ್ಸ್ ಹಿಂಪಡೆಯಲಿದೆ.
ರಫೆಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಅನಿಲ್ ಅಂಬಾನಿ ವಿರುದ್ಧ ಆರೋಪಗಳನ್ನು ಮಾಡಿದ್ದರು, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯೂ ರಫೆಲ್ ಬಗ್ಗೆ ಹಲವು ಸುದ್ದಿಗಳನ್ನು ಪ್ರಕರಟಿಸಿತ್ತು.
ಅಂಬಾನಿಯ ರಿಲಯನ್ಸ್ ಸಂಸ್ಥೆಯು ರಣದೀಪ್ ಸುರ್ಜೇವಾಲಾ, ಒಮ್ಮನ್ ಚಾಂಡಿ, ಅಶೋಕ್ ಚೌಹಾಣ್, ಅಭಿಷೇಕ್ ಮನು ಸಿಂಘ್ವಿ, ಸಂಜಯ್ ನಿರುಪಮ್, ಶಕ್ತಿಸಿನ್ಹ ಘೋಯಲ್ ಸೇರಿದಂತೆ ಹಲವರ ಮೇಲೆ ಮಾನನಷ್ಟ ಪ್ರಕರಣ ಹೂಡಿತ್ತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications