ಕೇಂದ್ರ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಪ್ರತಿಭಟನೆ
ನವದೆಹಲಿ, ಫೆ.16: ವಿವಾದಾತ್ಮಕ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಕೈ ಬಿಡಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಜಂತರ್ ಮಂತರ್ ಬಳಿ ಫೆ.22ರಿಂದ ಎರಡು ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅಣ್ಣಾ ಅವರ ಬೆಂಬಲಕ್ಕೆ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳು ನಿಂತಿದ್ದು, ಮೋದಿ ಸರ್ಕಾರಕ್ಕೆ ಈಗಲೇ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ.
ಕೇಂದ್ರ ಸರ್ಕಾರ ಕಳೆದ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ವಿವಾದಾತ್ಮಕ ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಜಾರಿಗೆ ತಂದಿತ್ತು. ಈ ಕಾಯ್ದೆಯನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಫೆ.22ರಿಂದ 24ರವರೆಗೆ ಪ್ರತಿಪಕ್ಷಗಳು ಪ್ರತಿಭಟನೆ ಹಮ್ಮಿಕೊಂಡಿವೆ.
ದೆಹಲಿಯ ಜಂತರ್-ಮಂತರ್ ಮೈದಾನದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್, ಜೆಡಿಯು, ಡಿಎಂಕೆ,ಬಿಎಸ್ಪಿ , ಎಸ್ಪಿ , ಎಎಪಿ, ಸಿಪಿಐಎಂ, ಟಿಎಂಸಿ, ಎನ್ಸಿಪಿ ಹಾಗೂ ಆರ್ಎಸ್ಎಸ್ನ ಅಂಗಸಂಸ್ಥೆಗಳು ಕೂಡ ಇದರಲ್ಲಿ ಪಾಲ್ಗೊಳ್ಳಲಿವೆ.

ಅಣ್ಣಾ ಹಜಾರೆ ನೇತೃತ್ವದಲ್ಲಿ ಧರಣಿ: ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ, ಸಾಮಾಜಿಕ ಹೋರಾಟಗಾರ್ತಿ ಹಾಗೂ ನರ್ಮದಾ ಬಚಾವೋ ಆಂದೋಲನದ ಮುಖ್ಯಸ್ಥೆ ಮೇಧಾ ಪಾಟ್ಕರ್, ಆರ್ಎಸ್ಎಸ್ನ ಮಾಜಿ ಮುಖಂಡ ಗೋವಿಂದಾಚಾರ್ಯ ಸೇರಿದಂತೆ ಆರ್ಎಸ್ಎಸ್ನ ಅಂಗಸಂಸ್ಥೆಗಳಾದ ಸ್ವದೇಶಿ ಜಾಗರಣ ಮಂಚ್, ಭಾರತೀಯ ಕಿಸಾನ್ ಸಂಘ ಇದರಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
ಕಾಂಗ್ರೆಸ್ನ ಯುವ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಯ ನೇತೃತ್ವ ವಹಿಸುವ ಸಾಧ್ಯತೆಯಿದೆ. ಕೆಲವು ಪ್ರಾದೇಶಿಕ ಪಕ್ಷಗಳು ಸಹ ಕೈ ಜೋಡಿಸಿದ್ದು , ಕೇಂದ್ರ ಸರ್ಕಾರದ ವಿರುದ್ಧ ಮೂರು ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ.ತ್ಯಾಗಿ ಹೇಳಿದ್ದಾರೆ.(ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications