ಸರ್ಕಾರದ ನಿದ್ದೆ ಕೆಡಿಸಲು ಸಜ್ಜಾದ ಅಣ್ಣಾ, ಮತ್ತೆ ಉಪವಾಸ ಸತ್ಯಾಗ್ರಹ
ನವದೆಹಲಿ, ಜನವರಿ 22: ಸಾಮಾಜಿಕ ಕಾರ್ಯಕರ್ತ, ಗಾಂಧಿವಾದಿ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆಚರಿಸುವುದಾಗಿ ಹೇಳಿದ್ದಾರೆ.
ಒಂದು ಕಾಲದಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಮನೆ ಮನೆ ಮಾತಾಗಿದ್ದ ಅಣ್ಣಾ ಈಗ ಮತ್ತೊಮ್ಮೆ ಅದೇ ಕಾರಣಕ್ಕೆ ಉಪವಾಸ ಆರಂಭಿಸಲಿರುವುದು ಕೇಂದ್ರ ಸರ್ಕಾರದ ನಿದ್ದೆ ಕೆಡಿಸಬಹುದು ಎಂದು ಅಂದಾಜಿಸಲಾಗಿದೆ.
2019 ರ ಜನವರಿ 30 ರಂದು ಅಂದರೆ ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯಂದು ಅವರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.

2014 ಜನವರಿಯಲ್ಲಿ ಸಂಸತ್ನಿಂದ ಅನುಮೋದನೆ ಪಡೆದು ರಾಷ್ಟ್ರಪತಿಯವರಿಂದ ಸಹಿ ಪಡೆದಿದ್ದರೂ ಲೋಕಪಾಲ ಮಸೂದೆಯನ್ನು ಜಾರಿಗೆ ತರುವಲ್ಲಿ ಎನ್ ಡಿಎ ಸರ್ಕಾರ ವಿಫಲವಾಗಿದೆ ಎಂದು ಖಂಡಿಸಿರುವ 81 ವರ್ಷ ವಯಸ್ಸಿನ ಅಣ್ಣಾ, ಅಕ್ಟೋಬರ್ 2 ರಂದೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದರು.
ಆದರೆ ಗಾಂಧೀಜಿಯವರ ಹುಟ್ಟಿದ ದಿನದಂದು ಉಪವಾಸ ಸತ್ಯಾಗ್ರಹ ನಡೆಸಲು ಹೊರಟಿದ್ದ ಅಣ್ಣಾ ಅವರ ಮನವೊಲಿಸಿ, ಉಪವಾಸ ಹಿಂಪಡೆಯುವಲ್ಲಿ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್ ಯಶಸ್ವಿಯಾಗಿದ್ದರು. ಆದರೆ ಪಟ್ಟು ಬಿಡದ ಅಣ್ಣಾ ಈಗ ಮತ್ತೊಮ್ಮೆ ಉಪವಾಸಕ್ಕೆ ಹೊರಟಿದ್ದಾರೆ.
2011 ರಲ್ಲಿ ಲೋಕಪಾಲ ಮಸೂದೆಗೆ ಒಪ್ಪಿಗೆ ನೀಡುವಂತೆ ಅಣ್ಣಾ ಹಜಾರೆ ಆರಂಭಿಸಿದ್ದ ಉಪವಾಸ ಸತ್ಯಾಗ್ರಹ ಅಂದಿನ ಯುಪಿಎ ಸರ್ಕಾರದ ಮೇಲೆ ಸಾಕಷ್ಟು ಪ್ರಭಾವ ಬೀರಿದಂತೆ, ಮುಂಬರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ಈಗಿನ ಎನ್ ಡಿಎ ಸರ್ಕಾರದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರಿದರೆ ಅಚ್ಚರಿಯಿಲ್ಲ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications