ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ ಅಣ್ಣಾ ಹಜಾರೆ
ನವದೆಹಲಿ, ಡಿಸೆಂಬರ್ 07: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ದೆಹಲಿಯ ಹೊರವಲಯದಲ್ಲಿ ಕೇಂದ್ರೀಕೃತವಾಗಿರುವ ರೈತರ ಆಂದೋಲನವನ್ನು ಬೆಂಬಲಿಸಲು ದೇಶಾದ್ಯಂತ ರೈತರು ಬೀದಿಗಿಳಿಯಬೇಕು ಎಂದು ಹಜಾರೆ ಕೋರಿದ್ದಾರೆ.
'' ಇಂತಹ ಆಂದೋಲನಗಳು ಮತ್ತೆ ಮತ್ತೆ ಸಂಭವಿಸಬಾರದು'' ಮತ್ತು ಸರ್ಕಾರದ ಮೇಲೆ ಒತ್ತಡ ಹೇರಲು ಇದು ಸರಿಯಾದ ಸಮಯವಾಗಿದೆ ಎಂದು ಹಜಾರೆ ಹೇಳಿದ್ದಾರೆ. ನಾಳೆ ರೈತರ ಪ್ರತಿಭಟನೆಗೆ ಬೆಂಬಲವಾಗಿ ಮೌನ ಉಪವಾಸ ಮಾಡಲಿದ್ದಾರೆ.
ರೈತರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ಕೃಷಿ ಸಚಿವರು ನೀಡಿದ ಭರವಸೆಗಳು ಈವರೆಗೆ ಈಡೇರಿಲ್ಲ. ರೈತರು ಬೀದಿಗಳಿದು ಹೋರಾಟ ನಡೆಸಿ ಆಂದೋಲವನ್ನು ಬೆಂಬಲಿಸಬೇಕು ಎಂದಿದ್ದಾರೆ. ಕೃಷಿ ಮತ್ತು ರೈತರ ಸಮಸ್ಯೆಗಳನ್ನು ಪರಿಹರಿಸಲು ಅವರ ಬೆಳೆಗಳಿಗೆ ಎಂಎಸ್ಪಿ ನೀಡುವ ಅವಶ್ಯಕತೆಯಿದೆ ಎಂದು ಅಣ್ಣಾ ಹಜಾರೆ ಹೇಳಿದರು. ಇದಕ್ಕಾಗಿ ಕೇಂದ್ರ ಕೃಷಿ ಬೆಲೆ ಆಯೋಗಕ್ಕೆ ಸ್ವಾಯತ್ತ ಸ್ಥಾನಮಾನ ನೀಡಬೇಕು. ಈ ಬೇಡಿಕೆಗಾಗಿ ನಾವು ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದೆವು ಎಂದರು.

ಕೇಂದ್ರ ಕೃಷಿ ಮೌಲ್ಯ ಆಯೋಗದ ಸ್ವಾಯತ್ತತೆ ಮತ್ತು ಸ್ವಾಮಿನಾಥ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವುದು ನಮ್ಮ ಮುಖ್ಯ ಬೇಡಿಕೆಯಾಗಿದೆ. ಆದಾಗ್ಯೂ, ಇದನ್ನು ಇಲ್ಲಿಯವರೆಗೆ ನಿರ್ಲಕ್ಷಿಸಲಾಗಿದೆ. ಈಗ ನಾವು ಮತ್ತೊಮ್ಮೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗುತ್ತೇವೆ ಎಂದಿದ್ದಾರೆ.
2011 ಮತ್ತು 2012 ರ ನಡುವೆ ಭ್ರಷ್ಟಾಚಾರದ ವಿರುದ್ಧ ಆಂದೋಲನವನ್ನು ಅಣ್ಣಾ ಹಜಾರೆ ಮುನ್ನಡೆಸಿದರು, ಇದು ಅಂದಿನ ಯುಪಿಎ ಸರ್ಕಾರವು ಚುನಾವಣೆಯಲ್ಲಿ ಸೋಲುವಂತೆ ಮಾಡಿತು. ಅಲ್ಲದೆ ಇವರ ದಿಟ್ಟತನದ ಹೋರಾಟವು ಹಜಾರೆ ಅವರನ್ನು ಮನೆ-ಮನೆ ಮಾತಾಗಿಸಿತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications