Get Updates
Get notified of breaking news, exclusive insights, and must-see stories!

ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ ಅಣ್ಣಾ ಹಜಾರೆ

ನವದೆಹಲಿ, ಡಿಸೆಂಬರ್ 07: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ದೆಹಲಿಯ ಹೊರವಲಯದಲ್ಲಿ ಕೇಂದ್ರೀಕೃತವಾಗಿರುವ ರೈತರ ಆಂದೋಲನವನ್ನು ಬೆಂಬಲಿಸಲು ದೇಶಾದ್ಯಂತ ರೈತರು ಬೀದಿಗಿಳಿಯಬೇಕು ಎಂದು ಹಜಾರೆ ಕೋರಿದ್ದಾರೆ.

'' ಇಂತಹ ಆಂದೋಲನಗಳು ಮತ್ತೆ ಮತ್ತೆ ಸಂಭವಿಸಬಾರದು'' ಮತ್ತು ಸರ್ಕಾರದ ಮೇಲೆ ಒತ್ತಡ ಹೇರಲು ಇದು ಸರಿಯಾದ ಸಮಯವಾಗಿದೆ ಎಂದು ಹಜಾರೆ ಹೇಳಿದ್ದಾರೆ. ನಾಳೆ ರೈತರ ಪ್ರತಿಭಟನೆಗೆ ಬೆಂಬಲವಾಗಿ ಮೌನ ಉಪವಾಸ ಮಾಡಲಿದ್ದಾರೆ.

ರೈತರ ಸಮಸ್ಯೆಗಳ ಕುರಿತು ಪ್ರಧಾನಿ ಮತ್ತು ಕೃಷಿ ಸಚಿವರು ನೀಡಿದ ಭರವಸೆಗಳು ಈವರೆಗೆ ಈಡೇರಿಲ್ಲ. ರೈತರು ಬೀದಿಗಳಿದು ಹೋರಾಟ ನಡೆಸಿ ಆಂದೋಲವನ್ನು ಬೆಂಬಲಿಸಬೇಕು ಎಂದಿದ್ದಾರೆ. ಕೃಷಿ ಮತ್ತು ರೈತರ ಸಮಸ್ಯೆಗಳನ್ನು ಪರಿಹರಿಸಲು ಅವರ ಬೆಳೆಗಳಿಗೆ ಎಂಎಸ್‌ಪಿ ನೀಡುವ ಅವಶ್ಯಕತೆಯಿದೆ ಎಂದು ಅಣ್ಣಾ ಹಜಾರೆ ಹೇಳಿದರು. ಇದಕ್ಕಾಗಿ ಕೇಂದ್ರ ಕೃಷಿ ಬೆಲೆ ಆಯೋಗಕ್ಕೆ ಸ್ವಾಯತ್ತ ಸ್ಥಾನಮಾನ ನೀಡಬೇಕು. ಈ ಬೇಡಿಕೆಗಾಗಿ ನಾವು ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದೆವು ಎಂದರು.

 Anna Hazare Urges Farmers Across Country To Take Street In Support Of Farmer Protest

ಕೇಂದ್ರ ಕೃಷಿ ಮೌಲ್ಯ ಆಯೋಗದ ಸ್ವಾಯತ್ತತೆ ಮತ್ತು ಸ್ವಾಮಿನಾಥ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವುದು ನಮ್ಮ ಮುಖ್ಯ ಬೇಡಿಕೆಯಾಗಿದೆ. ಆದಾಗ್ಯೂ, ಇದನ್ನು ಇಲ್ಲಿಯವರೆಗೆ ನಿರ್ಲಕ್ಷಿಸಲಾಗಿದೆ. ಈಗ ನಾವು ಮತ್ತೊಮ್ಮೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗುತ್ತೇವೆ ಎಂದಿದ್ದಾರೆ.

2011 ಮತ್ತು 2012 ರ ನಡುವೆ ಭ್ರಷ್ಟಾಚಾರದ ವಿರುದ್ಧ ಆಂದೋಲನವನ್ನು ಅಣ್ಣಾ ಹಜಾರೆ ಮುನ್ನಡೆಸಿದರು, ಇದು ಅಂದಿನ ಯುಪಿಎ ಸರ್ಕಾರವು ಚುನಾವಣೆಯಲ್ಲಿ ಸೋಲುವಂತೆ ಮಾಡಿತು. ಅಲ್ಲದೆ ಇವರ ದಿಟ್ಟತನದ ಹೋರಾಟವು ಹಜಾರೆ ಅವರನ್ನು ಮನೆ-ಮನೆ ಮಾತಾಗಿಸಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+