ಎರಡು ತಿಂಗಳ ಬಳಿಕ ನೋಯ್ಡಾ-ಫರಿದಾಬಾದ್ ರಸ್ತೆ ಸಂಚಾರಕ್ಕೆ ಮುಕ್ತ
ನವದೆಹಲಿ, ಫೆಬ್ರವರಿ.21: ಶಾಹಿನ್ ಬಾಗ್ ನಲ್ಲಿ ನಡೆಯುತ್ತಿದ್ದ ಉಗ್ರ ಹೋರಾಟದಿಂದ ಬಂದ್ ಆಗಿದ್ದ ನೋಯ್ಡಾ ಮತ್ತು ಫರಿದಾಬಾದ್ ರಸ್ತೆ ಶುಕ್ರವಾರ ಸಂಚಾರಕ್ಕೆ ಮುಕ್ತವಾಗಿದೆ. ಉತ್ತರ ಪ್ರದೇಶ ಪೊಲೀಸರು ರಸ್ತೆಯಲ್ಲಿ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಶಾಹಿನ್ ಬಾಗ್ ನಲ್ಲಿ ಕಳೆದ 69 ದಿನಗಳಿಂದಲೂ ನಿರಂತರ ಪ್ರತಿಭಟನೆ ನಡೆಸಲಾಗುತ್ತಿತ್ತು. ಇದರಿಂದ ನೋಯ್ಡಾ ಮತ್ತು ಕಲಿಂದಿ ಕುಂಜ್ ನಡುವಿನ ರಸ್ತೆ ಸಂಪರ್ಕವನ್ನು ಬಂದ್ ಮಾಡಲಾಗಿತ್ತು.
ನವದೆಹಲಿಯ ದಕ್ಷಿಣ ಭಾಗದಲ್ಲಿ ಇರುವ ಶಾಹಿನ್ ಬಾಗ್ ಮತ್ತು ಕಲಿಂದಿ ಕುಂಜ್ ರಸ್ತೆಯನ್ನು ಎರಡು ತಿಂಗಳಿನಿಂದ ಬಂದ್ಲ ಮಾಡಲಾಗಿದ್ದು, ಇದರಿಂದ ಸಾರ್ವಜನಿಕರು ತೀವ್ರ ಸಂಕಷ್ಟು ಅನುಭವಿಸುವಂತಾ ಪರಿಸ್ಥಿತಿ ನಿರ್ಮಾಣವಾಗಿತ್ತು.

ಶಾಹಿನ್ ಬಾಗ್ ರಸ್ತೆ ತೆರವಿಗೆ ಮಧ್ಯವರ್ತಿ ನೇಮಕ:
ಶಾಹಿನ್ ಬಾಗ್ ನಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರೋಧಿ ಹೋರಾಟಗಾರರು ರಸ್ತೆಯಲ್ಲೇ ಪ್ರತಿಭಟನೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಅಲ್ಲದೇ ಸಿಎಎ ವಿರೋಧಿ ಹೋರಾಟಗಾರರ ಜೊತೆಗೆ ಸಂಧಾನ ನಡೆಸುವುದಕ್ಕೆ ಹಿರಿಯ ವಕೀಲ ಸಂಜಯ್ ಹೆಗ್ಡೆ, ವಕೀಲೆ ಸಾಧನಾ ರಾಮಚಂದ್ರನ್ ಮತ್ತು ಮಾಹಿತಿ ಆಯೋಗದ ಮಾಜಿ ಮುಖ್ಯಸ್ಥ ವಜಾಹತ್ ಹಬೀಬುಲ್ಲಾರನ್ನು ನೇಮಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಶಾಹಿನ್ ಬಾಗ್ ಹೋರಾಟಗಾರರ ಜೊತೆ ಸಂಧಾನಕ್ಕೆ ನೇಮಿಸಿದ ಮೂವರು ಸದಸ್ಯರು ಶಾಂತಿ ಮಾತುಕತೆ ನಡೆಸುತ್ತಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications