ದೆಹಲಿಯಲ್ಲಿ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ
ನವದೆಹಲಿ, ಸೆ.3 : ನವದೆಹಲಿಯ ಶಾಹದರಾ ಕ್ಷೇತ್ರದ ಬಿಜೆಪಿ ಶಾಸಕ ಜಿತೇಂದ್ರ ಸಿಂಗ್ ಮೇಲೆ ಅಪರಿಚಿತ ವ್ಯಕ್ತಿಗಳು ಬುಧವಾರ ಮುಂಜಾನೆ ಗುಂಡಿನಾ ದಾಳಿ ನಡೆಸಿದ್ದಾರೆ. ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ಕೃತ್ಯ ಸೆರೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಬುಧವಾರ ಮುಂಜಾನೆ ವಿವೇಕ್ ವಿಹಾರ್ನಲ್ಲಿರುವ ಜಿತೇಂದ್ರ ಸಿಂಗ್ ಅವರ ನಿವಾಸಕ್ಕೆ ಆಗಮಿಸಿದ ದುಷ್ಕರ್ಮಿಗಳು, ಜಿತೇಂದ್ರ ಅವರು ಮನೆಯಿಂದ ಹೊರಬಂದ ಬಳಿಕ ಅವರ ಮೇಲೆ ಹಲ್ಲೆ ನಡೆಸಿ, ಗುಂಡು ಹಾರಿಸಿದ್ದಾರೆ. ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಂಗ್ ಅವರ ಮನೆಗೆ ದುಷ್ಕರ್ಮಿಗಳು ಆಗಮಿಸುವುದು ಮತ್ತು ಅವರು ಮನೆಯಿಂದ ಹೊರಗೆ ಬಂದ ನಂತರ ಹಲ್ಲೆ ಮಾಡುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಬ್ಬರು ದುಷ್ಕರ್ಮಿಗಳು ಸಿಂಗ್ ಮನೆಗೆ ಬಂದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ.
ದೆಹಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ವೈಯಕ್ತಿಕ ಅಥವ ರಾಜಕೀಯ ದ್ವೇಷ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.












Click it and Unblock the Notifications