ಹಿಂಸಾಚಾರಿಗಳಿಗೆ ನಾಯಕತ್ವದ ಪಾಠ ಮಾಡಿದ ಬಿಪಿನ್ ರಾವತ್
ದೆಹಲಿ, ಡಿಸೆಂಬರ್.26: ದೇಶದಲ್ಲಿ ಹಿಂಸಾಚಾರ ನಡೆಸುವುದು ಸಾರ್ವಜನಿಕ ಆಸ್ತಿ ಪಾಸ್ತಿಗೆ ಬೆಂಕಿ ಹಚ್ಚುವುದನ್ನು ಯಾರೂ ನಾಯಕತ್ವ ಅಂತಾ ಹೇಳುವುದಿಲ್ಲ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಕಿಡಿ ಕಾರಿದ್ದಾರೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಬೃಹತ್ ಹೋರಾಟ ನಡೆಯುತ್ತಿದೆ. ಆದರೆ, ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ನಡೆಸಲಾಗುತ್ತಿದೆ. ದೇಶದ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡುತ್ತಿರುವುದು ಎಂತಹ ಹೋರಾಟ ಎಂದು ರಾವತ್ ಪ್ರಶ್ನೆ ಮಾಡಿದ್ದಾರೆ.
ದೇಶದ ಜನರನ್ನು ಸನ್ಮಾರ್ಗದಲ್ಲಿ ನಡೆಸಿಕೊಂಡು ಹೋಗುವುದೇ ನಿಜವಾದ ನಾಯಕತ್ವ. ಸೂಕ್ತ ಮಾರ್ಗದರ್ಶನ ಮೂಲಕ ಹೋರಾಟ ನಡೆಸುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಕೆಲವು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳನ್ನು, ಸಿಬ್ಬಂದಿಯನ್ನು ಬಳಸಿಕೊಂಡು ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಬಿಪಿನ್ ರಾವತ್ ಕಿಡಿ ಕಾರಿದ್ದಾರೆ.

ಹಿಂಸಾಚಾರಕ್ಕೆ ಪ್ರೇರೇಪಿಸುವುದು ನಾಯಕತ್ವವಲ್ಲ:
ದೇಶದಲ್ಲಿ ಜನರನ್ನು ತಪ್ಪು ಮಾರ್ಗದಲ್ಲಿ ನಡೆಸುವುದೇ ನಿಜವಾದ ನಾಯಕತ್ವ ಅಲ್ಲ. ಇಂದು ದೊಡ್ಡ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ದಾರಿ ತಪ್ಪಿಸುವ ಕೆಲಸಗಳು ನಡೆಯುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಹಾಗೂ ಜನರನ್ನೆಲ್ಲ ಸೇರಿಸಿಕೊಂಡು ಹಿಂಸಾಚಾರ ನಡೆಸಲಾಯಿತು. ಇದನ್ನು ನಾಯಕತ್ವ ಎಂದು ಹೇಳುವುದಕ್ಕೆ ಆಗುವುದಿಲ್ಲ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ವಾಗ್ದಾಳಿ ನಡೆಸಿದರು.

ತಪ್ಪಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದ ಮೋದಿ:
ಡಿಸೆಂಬರ್.25ರಂದು ಉತ್ತರ ಪ್ರದೇಶದ ಲಕ್ನೋದಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಹಿಂಸಾಚಾರ ನಡೆಸಿದವರ ಬಗ್ಗೆ ಮಾತನಾಡಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಹೋರಾಟ ಮಾಡುತ್ತೀರಾ. ಆದರೆ, ಪ್ರತಿಭಟನೆ ಹೆಸರಿನಲ್ಲಿ ದೇಶದ ಆಸ್ತಿ ಪಾಸ್ತಿಗಳಿಗೆ ಧಕ್ಕೆ ಉಂಟು ಮಾಡುವುದು ಎಷ್ಟು ಸರಿಯೋ ತಪ್ಪೋ ಎಂದು ನೀವೇ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಕರೆ ನೀಡಿದ್ದರು.
-
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications