ಆದೇಶ ಬಂದರೆ ಪಾಕ್ ಆಕ್ರಮಿತ ಕಾಶ್ಮೀರ ವಶಪಡಿಸಿಕೊಳ್ಳಲು ಸಿದ್ಧ: ಜನರಲ್ ನರವಾಣೆ
ನವದೆಹಲಿ, ಜನವರಿ 11: ಸರ್ಕಾರದಿಂದ ಆದೇಶ ಬಂದರೆ ಪಾಕ್ ಆಕ್ರಮಿತ ಕಾಶ್ಮೀರ ವನ್ನು ವಶಪಡಿಸಿಕೊಳ್ಳಲು ಸೇನೆ ಸಿದ್ಧವಾಗಿದೆ ಎಂದು ಹೊಸ ಸೇನಾ ಜನರಲ್ ಮುಕುಂದ್ ನರವಾಣೆ ಹೇಳಿದ್ದಾರೆ.
ಮೊದಲ ಸುದ್ದಿಗೋಷ್ಠಿ ಉದ್ಧೇಶಿಸಿ ಮಾತನಾಡಿದ ಸೇನಾ ಜನರಲ್ ಮುಕುಂದ್ ನರವಾಣೆ, 'ಸಂಸತ್ತು ಒಪ್ಪಿ ಆ ಭೂಭಾಗ (ಪಾಕ್ ಆಕ್ರಮಿತ ಕಾಶ್ಮೀರ) ನಮ್ಮ (ಭಾರತ)ದ ಭಾಗ ಆಗಬೇಕು ಎಂದು ಬಯಸಿದರೆ ವಶಪಡಿಸಿಕೊಳ್ಳಲು ಸೇನೆ ಸಿದ್ಧವಿದೆ' ಎಂದಿದ್ದಾರೆ.
ಆರ್ಟಿಕಲ್ 370 ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಸಂಸತ್ತಿನಲ್ಲಿ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚೀನಾ ಜಮ್ಮು ಕಾಶ್ಮೀರದ ಭಾಗ ಎಂದಿದ್ದರು. ಅಷ್ಟೆ ಭದ್ರತಾ ಸಚಿವ ರಾಜನಾಥ್ ಸಿಂಗ್ ಸಹ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, 'ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದರೆ ಅದು ಕೇವಲ ಪಿಓಕೆ ಬಗ್ಗೆ ಮಾತ್ರ' ಎಂದಿದ್ದರು.

ಸೇನಾ ಜನರಲ್ ಆಗಿದ್ದ ಬಿಪಿನ್ ರಾವತ್ ಅವರ ಸ್ಥಾನಕ್ಕೆ ಮುಕುಂದ್ ನರವಾಣೆ ನೇಮಕವಾಗಿದ್ದಾರೆ. ಶ್ರೀನಗರ ಮತ್ತು ಲೇಹ್ ಭಾಗಗಳಲ್ಲಿ 30 ಸೈನಿಕ ಪಡೆಗಳು ಯುದ್ಧ ತರಬೇತಿಯಲ್ಲಿ ನಿರತವಾಗಿವೆ ಎಂದೂ ಸಹ ನರವಾಣೆ ಹೇಳಿದ್ದಾರೆ.
ಈ ಹಿಂದಿನ ಜನರಲ್ ಬಿಪಿನ್ ರಾವತ್ ಸಹ ಪಿಓಕೆ ಬಗ್ಗೆ ಮಾತನಾಡುತ್ತಾ, 'ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಆಡಳಿತ ಪಾಕಿಸ್ತಾನದ ಕೈಯಲ್ಲಿಲ್ಲ ಬದಲಿಗೆ ಭಯೋತ್ಪಾದಕರ ಕೈಯಲ್ಲಿದೆ. ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಬಿಟ್ ಬಲ್ತಿಸ್ತಾನವು ಜಮ್ಮು ಕಾಶ್ಮೀರದ ಭಾಗವೇ ಎಂದು ಹೇಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications